ಬ್ರೇಕಿಂಗ್ ನ್ಯೂಸ್
24-05-21 05:30 pm Mangalore Correspondent ಕರಾವಳಿ
ಮಂಗಳೂರು, ಮೇ 24: ಕೊರೊನಾ ಲಾಕ್ಡೌನಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡೋರಂದ್ರೆ ಪೊಲೀಸರು. ಎಲ್ಲ ಜನ ಮನೆಯಲ್ಲಿ ಕುಳಿತರೂ, ಪೊಲೀಸರು ಮಾತ್ರ ಬೀದಿ ಕಾಯಲೇಬೇಕು ಎನ್ನುವ ಸ್ಥಿತಿ. ಹೀಗಾಗಿ ವಿವಿಧ ಸಂಸ್ಥೆಗಳು ಪೊಲೀಸರಿಗೆ ಊಟ, ಚಹಾ, ತಿಂಡಿ ಕೊಡಲು ಮುಂದೆ ಬಂದಿದ್ದಾರೆ. ಆದರೆ, ಮಂಗಳೂರು ಪೊಲೀಸ್ ಕಮಿಷನರ್ ಅಗತ್ಯವಿದ್ದುದನ್ನು ಮಾತ್ರ ಸ್ವೀಕರಿಸುತ್ತಿದ್ದಾರೆ. ಪೊಲೀಸರಿಗೆ ಬೇರೆ ಯಾವ ವಿಧದಲ್ಲಿ ನೆರವಾಗಬಹುದು ಎಂದು ಯೋಚನೆ ಮಾಡಿದ ಮಂಗಳೂರಿನ ಟಿವಿಎಸ್ ಟು - ವೀಲರ್ ಶೋರೂಮ್ ಸಂಸ್ಥೆಯವರು ವಿಭಿನ್ನ ರೀತಿಯ ಸೇವೆ ನೀಡಿದ್ದಾರೆ.
ಪೊಲೀಸರ ಸೇವೆಗಾಗಿ ನೂರಾರು ವಾಹನಗಳಿರುತ್ತವೆ. ಲಾಕ್ಡೌನಲ್ಲಿ ಗ್ಯಾರೇಜ್, ಶೋರೂಮ್ ಬಂದ್ ಆಗಿರುವ ಮಧ್ಯೆ ತುರ್ತಾಗಿ ವಾಹನಗಳನ್ನು ಸರ್ವಿಸ್ ಮಾಡುವುದಾಗಲೀ, ರಿಪೇರಿ ಮಾಡುವುದಾಗಲೀ ಸಾಧ್ಯವಾಗಲ್ಲ. ಪೊಲೀಸರಿಗೆ ಇದರಿಂದ ತೊಂದರೆ ಆಗಬಾರದೆಂಬ ನೆಲೆಯಲ್ಲಿ ಮಂಗಳೂರಿನ ಹೆಸರಾಂತ ಸಾಯಿರಾಧಾ ಟಿವಿಎಸ್ ಶೋರೂಂ ಸಂಸ್ಥೆಯವರು ಪೊಲೀಸರ ವಾಹನಗಳನ್ನು ಉಚಿತವಾಗಿ ಸರ್ವಿಸ್ ಮಾಡಿಕೊಡಲು ಮುಂದೆ ಬಂದಿದ್ದಾರೆ.
ಟಿವಿಎಸ್ ಕಂಪನಿಯ ವಾಹನಗಳನ್ನು ಉಚಿತವಾಗಿ ಆಯಿಲ್ ಚೇಂಜ್ ಸೇರಿ ಎಲ್ಲ ರೀತಿಯ ರಿಪೇರಿಯನ್ನೂ ಕಂಪನಿ ಮೆಕ್ಯಾನಿಕ್ ಗಳೇ ಮಾಡಿಕೊಡುತ್ತಿದ್ದಾರೆ. ಸಾಧಾರಣವಾಗಿ ಒಂದು ಬೈಕಿಗೆ 800 – 1000 ರೂ. ಖರ್ಚು ಬರುತ್ತಿದ್ದರೆ, ಅವನ್ನು ಸಾಯಿರಾಧಾ ಸಂಸ್ಥೆಯವರೇ ಭರಿಸಿದ್ದಾರೆ. ಪೊಲೀಸರ ವಾಹನಗಳ ಸರ್ವಿಸ್ ಮಾಡುವ ಮೂಲಕ ಸಾಯಿರಾಧಾ ಸಂಸ್ಥೆಯವರು ಹೊಸ ರೀತಿಯಲ್ಲಿ ಪೊಲೀಸರ ಕಾರ್ಯಕ್ಕೆ ಸಾಥ್ ನೀಡಿದ್ದಾರೆ.
ಇಂದು ಬೆಳಗ್ಗೆ ಕಮಿಷನರ್ ಕಚೇರಿಗೆ ಆಗಮಿಸಿದ್ದ ಟಿವಿಎಸ್ ಸಾಯಿರಾಧಾ ಸಂಸ್ಥೆಯ ಪಾಲುದಾರ ಸಿದ್ದಾರ್ಥ ಶೆಟ್ಟಿ, ಈ ರೀತಿಯ ಅವಕಾಶ ಕೊಟ್ಟಿದ್ದಕ್ಕೆ ಕಮಿಷನರ್ ಶಶಿಕುಮಾರ್ ಅವರಿಗೆ ಧನ್ಯವಾದ ಹೇಳಿದರು. ಮೇ 20ರಿಂದ 25ರ ವರೆಗೆ ಪೊಲೀಸ್ ಗ್ರೌಂಡಿಗೇ ಬಂದು ನಮ್ಮ ಮೆಕ್ಯಾನಿಕ್ ಗಳು ರಿಪೇರಿ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ವಾಹನಗಳನ್ನು ಶೋರೂಮಿಗೆ ತಂದು ಕೊಟ್ಟರೂ ಸರ್ವಿಸ್ ಮಾಡಿಕೊಡುತ್ತೇವೆ ಎಂದು ಸಿದ್ದಾರ್ಥ ಶೆಟ್ಟಿ ಹೇಳಿದ್ದಾರೆ.
ಸಿದ್ದಾರ್ಥ ಶೆಟ್ಟಿ ಮತ್ತು ಅವರ ತಂದೆ ಮನೋಹರ್ ಶೆಟ್ಟಿ ಸಾಯಿರಾಧಾ ಬ್ರಾಂಡ್ ಹೆಸರಲ್ಲಿ ಮಂಗಳೂರು ಮತ್ತು ಉಡುಪಿಯಲ್ಲಿ ಮೆಡಿಕಲ್ಸ್, ಹೊಟೇಲ್, ಹೆರಿಟೇಜ್ ರೆಸಾರ್ಟ್, ಟಿವಿಎಸ್ ಶೋರೂಂ ಹೀಗೆ ವಿವಿಧ ರೀತಿಯ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.
Video:
Sai Radha TVS Offer Free Check-Up and Service of 48 TVS Apache Bikes of Mangalore Police. This project is initiated under the leadership of Manohar Shetty and Siddarth Shetty-Managing Partners of Sai Radha TVS.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm