ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.
2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm