ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm