ಬ್ರೇಕಿಂಗ್ ನ್ಯೂಸ್
27-05-21 12:37 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕ್ರಿಕೆಟ್ ಆಡುತ್ತಿದ್ದ ಯುವಕರು ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನೆ ಮಾಡಿದ್ದ ಪಿಡಿಓ ಅಧಿಕಾರಿ ಮೇಲೆ ಹಲ್ಲೆಗೈದಿದ್ದ ನಾಲ್ವರು ಯುವಕರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮಹಮ್ಮದ್ ಇದಾಯತುಲ್ಲಾ (25), ಪುದು ನಿವಾಸಿ ಅಹ್ಮದ್ ಬಸೀರ್ (30), ಕುತ್ತಾರ್ ನಿವಾಸಿ ಅಬುಬಕ್ಕರ್ ಸಿದ್ದಿಕ್(26), ಪರಂಗಿಪೇಟೆಯ ಅಹ್ಮದ್ ಸಿದ್ದಿಕ್ (33) ಬಂಧಿತರು.
ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪಿಡಿಓ ಆಗಿರುವ ರಾಜೇಂದ್ರ ಶೆಟ್ಟಿಗೆ ಮಲ್ಲೂರಿನಲ್ಲಿ ಪಿಡಿಓ ಮತ್ತು ಕೋವಿಡ್ ನಿಯಂತ್ರಣದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ಮಲ್ಲೂರು ಗ್ರಾಪಂ ಕಚೇರಿ ಬಳಿಯಲ್ಲಿ ಮೇ 25ರಂದು ಯುವಕರು ಕ್ರಿಕೆಟ್ ಆಡುತ್ತಿದ್ದ ವೇಳೆ ಗುಂಪು ಕೂಡಿದ್ದರು. ಈ ವೇಳೆ ಸ್ಥಳಕ್ಕೆ ತೆರಳಿದ್ದ ರಾಜೇಂದ್ರ ಶೆಟ್ಟಿ, ಕೊರೊನಾ ಇರುವುದರಿಂದ ಮಾಸ್ಕ್ ಹಾಕದೇ ಗುಂಪು ಸೇರುವುದು ಸರಿಯಲ್ಲ ಎಂದಿದ್ದರು. ಆದರೆ, ಯುವಕರು ತನ್ನ ಮಾತನ್ನು ಕೇಳದೇ ಇದ್ದಾಗ ರಾಜೇಂದ್ರ ಶೆಟ್ಟಿ ಮೊಬೈಲಿನಲ್ಲಿ ವಿಡಿಯೋ ಮಾಡಲು ಯತ್ನಿಸಿದ್ದಾರೆ.

ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವಕರು ರಾಜೇಂದ್ರ ಶೆಟ್ಟಿಯ ಕೆನ್ನೆಗೆ ಹೊಡೆದಿದ್ದು ದೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಅಷ್ಟರಲ್ಲಿ ಮಲ್ಲೂರು ಗ್ರಾಪಂ ಕಚೇರಿಯಲ್ಲಿದ್ದ ಸಿಬಂದಿ ಗಿರೀಶ್ ಮತ್ತು ಅಧ್ಯಕ್ಷ ಇಸ್ಮಾಯಿಲ್ ಓಡಿ ಬಂದಿದ್ದು, ಆರೋಪಿಗಳು ತಮ್ಮ ಬೈಕಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಮನ್ಸೂರ್ ಆಲಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗೋಷ್ಠಿ ಕರೆದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕೆಲವು ಒಳ ಪ್ರದೇಶಗಳಲ್ಲಿ ಯುವಕರು ಕ್ರಿಕೆಟ್, ವಾಲಿಬಾಲ್ ಆಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಇದಕ್ಕಾಗಿ ಆಯಾ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸರ ಗಸ್ತನ್ನು ಹೆಚ್ಚಿಸುವಂತೆ ಸೂಚಿಸಿದ್ದೇನೆ. ಯುವಕರು ಕ್ರಿಕೆಟ್ ಆಡುವುದು ಪತ್ತೆಯಾದರೆ ಬಂಧಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Read: ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ ಪಿಡಿಓ ಮೇಲೆ ಯುವಕರಿಂದ ಹಲ್ಲೆ ; ಮಲ್ಲೂರಿನಲ್ಲಿ ಘಟನೆ
In connection to assault on Ulaibettu Gram Panchyath PDO the Mangalore City Police have arrested four youths. The incident took place when the youths were found playing cricket violating covid rules.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am