ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.
ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm