ಬ್ರೇಕಿಂಗ್ ನ್ಯೂಸ್
27-05-21 06:45 pm Mangalore Correspondent ಕರಾವಳಿ
ಮಂಗಳೂರು, ಮೇ 27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಮತ್ತು ಅಧಿಕಾರಿಗಳ ಜೊತೆ ವಿಧಾನಸೌಧ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರಾ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಸುದೀರ್ಘ ಚರ್ಚೆ ನಡೆಸಲಾಗಿದ್ದು ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.
ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Minister of Food, Civil Supplies and Consumer Affairs Department of Karnataka Umesh Katti, District in-charge minister Kota Srinivas Poojary on Thursday, May 27 said that the district administration is likely to provide boiled rice (red) under the Public Distribution System (PDC) in Dakshina Kannada from November.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm