ಬ್ರೇಕಿಂಗ್ ನ್ಯೂಸ್
27-05-21 09:32 pm Mangaluru Correspondent ಕರಾವಳಿ
ಕುಂದಾಪುರ, ಮೇ 27: ಎಂಬಿಬಿಎಸ್ ಕಲಿತು ಪಿಜಿ- ನೀಟ್ ಎಕ್ಸಾಂ ಬರೆಯಲು ರೆಡಿಯಾಗುತ್ತಿದ್ದವರು ಅತ್ತ ಪರೀಕ್ಷೆ ಮುಂದೂಡಿಕೆ ಆಗುತ್ತಲೇ ಮತ್ತೆ ನಿರಾಸೆಯಾಗಿದ್ದಾರೆ. ಆದರೆ, ಕುಂದಾಪುರದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದವರು ತಮ್ಮ ಖಾಲಿ ಅವಧಿಯನ್ನು ಆಸ್ಪತ್ರೆಯಲ್ಲಿ ಕಳೆಯಲು ನಿರ್ಧರಿಸಿದ್ದಾರೆ. ಕೋವಿಡ್ ರೋಗಿಗಳು ಕಷ್ಟಪಡುತ್ತಿರುವ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಕೈಲಾದ ಸೇವೆ ನೀಡಲು ಮುಂದಾಗಿದ್ದಾರೆ.
ಮುಂಬೈನಲ್ಲಿ ಎಂಬಿಬಿಎಸ್ ಮುಗಿಸಿದ್ದ ಡಾ.ರಚನಾ ಶೆಟ್ಟಿ ಸ್ನಾತಕೋತ್ತರ ಪದವಿಗಾಗಿ ನೀಟ್ ಎಕ್ಸಾಂ ಬರೆಯಲು ರೆಡಿ ಮಾಡಿಕೊಂಡಿದ್ದರು. ಮುಂಬೈನಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಅವರ ತಂದೆ ಸುರೇಶ್ ಶೆಟ್ಟಿ ಕಳೆದ ಪೆಬ್ರವರಿಯಲ್ಲಿ ನಿಧನರಾದ ಹಿನ್ನೆಲೆ ರಚನಾ ಊರಿಗೆ ಮರಳಿದ್ದರು. ಊರಲ್ಲೇ ಇದ್ದುಕೊಂಡು ಮುಂದಿನ ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಈ ವೇಳೆ ತಾಯಿ ಮಾತ್ರ, ಮಗಳಲ್ಲಿ ನೀನು ಇಲ್ಲೇ ಇರು ಎಂದು ಒತ್ತಾಯಿಸುತ್ತಿದ್ದರು.

ನಮ್ಮ ಕುಟುಂಬವೂ ತಂದೆಯ ಸಾವಿನಿಂದಾಗಿ ಚಿಂತೆಯಲ್ಲಿತ್ತು. ಹೀಗಾಗಿ ಸ್ಥಳೀಯ ಆಸ್ಪತ್ರೆ ಒಂದರಲ್ಲಿ ಹುದ್ದೆ ಖಾಲಿ ಇರುವುದನ್ನು ತಿಳಿದು ಅಪ್ಲೈ ಮಾಡಿದ್ದೆ. ಕೋವಿಡ್ ಸೋಂಕಿತರು ಒಂದೇ ಸಮನೆ ಹೆಚ್ಚುತ್ತಿರುವುದರಿಂದ ವರ್ಕ್ ಲೋಡ್ ಕೂಡ ಜಾಸ್ತಿಯಾಯ್ತು. ಆದರೂ ವರ್ಕ್ ಮತ್ತು ಸ್ಟಡಿಯನ್ನೂ ಒಟ್ಟಿಗೇ ಮಾಡುತ್ತಿದ್ದೇನೆ ಎಂದು ಹೇಳಿದರು.
ಕುಂದಾಪುರ ಮೂಲದವರೇ ಆಗಿರುವ ಡಾ.ರಜತ್ ಶೆಟ್ಟಿ ಮತ್ತು ಸೋದರ ಡಾ.ಆಶಿತ್ ಶೆಟ್ಟಿ ಕೂಡ ಎಂಬಿಬಿಎಸ್ ಮುಗಿಸಿ ನೀಟ್ ಎಕ್ಸಾಂ ಬರೆಯಲು ರೆಡಿಯಾಗಿದ್ದರು. ಕಳೆದ ವರ್ಷವೂ ಅವರು ಊರಿಗೆ ಬಂದಿದ್ದ ವೇಳೆ ಕೊರೊನಾ ಸೋಂಕು ಆವರಿಸಿದ್ದರಿಂದ ತಾಲೂಕು ಆಸ್ಪತ್ರೆಯಲ್ಲಿ ಸೇವೆಯಲ್ಲಿ ತೊಡಗಿದ್ದರು. ಈ ಬಾರಿಯೂ ಕೊರೊನಾ ಎರಡನೇ ಅಲೆ ಆವರಿಸಿದ್ದು ವೈದ್ಯ ಸೋದರರಿಬ್ಬರು ಮತ್ತೆ ಅದೇ ಆಸ್ಪತ್ರೆಯಲ್ಲಿ ರೋಗಿಗಳ ಸೇವೆಯಲ್ಲಿ ನಿರತರಾಗಿದ್ದಾರೆ.

ಕೊರೊನಾ ಎರಡನೇ ಅಲೆ ತುಂಬ ಸೀರಿಯಸ್ ಆಗಿದ್ದರೂ ವಿಭಿನ್ನ ಅನುಭವಗಳಿಗೆ ಸಾಕ್ಷಿಯಾಗುತ್ತಿದ್ದೇವೆ. ಪ್ರಾಕ್ಟೀಸ್ ಮಾಡುತ್ತಾ ಪರೀಕ್ಷೆಗೆ ಸಿದ್ಧತೆ ನಡೆಸುವುದು ಕಷ್ಟ. ಆದರೆ, ಎಕ್ಸಾಂ ಯಾವಾಗ ಆಗುತ್ತೆ ಅನ್ನೋದು ಸ್ಪಷ್ಟವಾಗಿಲ್ಲ. ನಾವು ಈ ವರ್ಷವೇ ಬರೆಯಬೇಕು ಎಂದುಕೊಂಡಿದ್ದೆವು. ಮುಂದಿನ ವರ್ಷಕ್ಕೆ ಮತ್ತೆ ಸಿಲೆಬಸ್ ಬದಲಾಗಲೂಬಹುದು ಎಂದು ಹೇಳಿದ್ರು ಡಾ. ರಜತ್ ಶೆಟ್ಟಿ.
ಆಸ್ಪತ್ರೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಡಾ.ನಮೃತಾ ಕೂಡ ಇಂಥದ್ದೇ ಅಭಿಪ್ರಾಯ ಪಟ್ಟರು. ಕೆಲವೊಮ್ಮೆ ದಿನದ ಸೇವೆ ಮುಗಿಸುವಷ್ಟರಲ್ಲಿ ತುಂಬಾನೇ ದಣಿದು ಬಿಡುತ್ತೇವೆ. ಆದರೆ, ದುರಂತದ ಸಂದರ್ಭದಲ್ಲಿ ಸಮಾಜಕ್ಕಾಗಿ ಸೇವೆ ಮಾಡುತ್ತಿದ್ದೇವೆ ಎಂಬ ಸಂತಸ ನಮಗಿದೆ ಎಂದು ಹೇಳುತ್ತಾರೆ. ಈ ರೀತಿ ಕೆಲಸದಲ್ಲಿ ತೊಡಗಿರುವುದು ನಮಗೆ ವಿಶೇಷ ಅನುಭವಗಳನ್ನು ನೀಡುತ್ತಿದೆ. ಇದರಿಂದ ನಾವು ಬಹಳಷ್ಟು ಕಲಿಯಲು ಸಾಧ್ಯವಾಗುತ್ತಿದೆ ಎಂದರು ಡಾ.ನಿವೇದಿತಾ. ಎಲ್ಲ ಸಿಬಂದಿ, ಹಿರಿಯ ವೈದ್ಯರು, ನೋಡಲ್ ಅಧಿಕಾರಿಗಳು ತಮ್ಮ ಕರ್ತವ್ಯದ ಮಧ್ಯೆಯೂ ಗೈಡ್ ಮಾಡುತ್ತಾರೆ ಎಂದರು.
ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಈ ಬಾರಿ ಕೊರೊನಾ ಎರಡನೇ ಅಲೆಗೆ ಸುಮಾರು 700 ಮಂದಿ ಸೋಂಕಿತರು ಅಡ್ಮಿಟ್ ಆಗಿದ್ದಾರೆ. 40 ಮಂದಿ ಕೋವಿಡ್ ಸೋಂಕಿತ ಮಹಿಳೆಯರು ಮೆಟರ್ನಿಟಿ ವಾರ್ಡಿಗೆ ದಾಖಲಾಗಿದ್ದು ಸುರಕ್ಷಿತವಾಗಿ ಹೆರಿಗೆ ಆಗಿದ್ದಾರೆ ಎಂದು ತಾಲೂಕು ನೋಡಲ್ ಅಧಿಕಾರಿ ಡಾ. ನಾಗೇಶ್ ಮಾಹಿತಿ ನೀಡಿದರು.
With the exam entrance postponed, a group of fresh MBBS graduates from Kundapur in Udpui district, who have been prepUdupi for the PG-NEET for almost
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm