ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm