ಬ್ರೇಕಿಂಗ್ ನ್ಯೂಸ್
28-05-21 01:28 pm Mangalore Correspondent ಕರಾವಳಿ
ಮಂಗಳೂರು, ಮೇ 28 : ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಒಂದೇ ಕಡೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಸಿಗುವಂತೆ ಪರೀಕ್ಷೆ ಮತ್ತು ಸ್ಥಳದಲ್ಲಿಯೇ ಚಿಕಿತ್ಸೆ ನೀಡುವುದಕ್ಕಾಗಿ ಹಾಗೂ ಅವಶ್ಯಕತೆಯುಳ್ಳವರಿಗೆ ವೈದ್ಯಕೀಯ ಕಿಟ್ ಗಳನ್ನು ವಿತರಿಸುವುದು ಮುಂತಾದ ಉದ್ದೇಶಗಳಿಗಾಗಿ ಸಂಚಾರಿ ಕ್ಲಿನಿಕ್ ಒಳಗೊಂಡ “ವೈದ್ಯರ ನಡೆ, ಹಳ್ಳಿಗಳ ಕಡೆ" ಎಂಬ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಮಾಡಿದ್ದಾರೆ.
ಸ್ಥಳೀಯ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ವ್ಯಕ್ತಿಗಳನ್ನು ಸಂದರ್ಶಿಸಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ತಪಾಸಣೆಗೆ ಒಳಪಡಿಸಲು ಸಂಚಾರಿ ಕ್ಲಿನಿಕ್ ತಂಡಕ್ಕೆ ಶಿಫಾರಸು ಮಾಡಬೇಕು. ಗ್ರಾಮದ ಪ್ರತಿ ನಾಗರಿಕರೂ ಕೋವಿಡ್ -19 ತಪಾಸಣೆಗೆ ಒಳಪಡಲು ಅನುಕೂಲವಾಗುವಂತೆ “ವೈದ್ಯರ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಪ್ರಾರಂಭಿಸಲು ಕನಿಷ್ಠ ಎರಡು ದಿನಗಳ ಮುಂಚಿತವಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳು ಈ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಪ್ರಚಾರ ನೀಡಬೇಕು. ಮೊಬೈಲ್ ಕ್ಲಿನಿಕ್ ವಾಹನವು ಪ್ರತಿ ದಿನವು 3 ರಿಂದ 4 ಹಳ್ಳಿಗಳಿಗೆ ಭೇಟಿ ನೀಡಿ, ಸ್ಥಳದಲ್ಲಿಯೇ ಕೋವಿಡ್ ತಪಾಸಣೆಯನ್ನು ಕೈಗೊಳ್ಳುವಂತೆ ಗುರಿ ನಿಗದಿಪಡಿಸಿ, ಮುಂದಿನ ಅವಧಿಯಲ್ಲಿ ಯಾವ ಗ್ರಾಮಕ್ಕೆ ಭೇಟಿ ನೀಡಬೇಕು ಎಂಬುದರ ಬಗ್ಗೆ ಯೋಜನೆ ರೂಪಿಸಿಕೊಳ್ಳಬೇಕು.

ತಪಾಸಣೆ ಬಳಿಕ ರೋಗಿ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕೇ ಅಥವಾ ಹೋಂ ಐಸೊಲೇಶನ್ ನಲ್ಲಿರಬೇಕೇ ಎಂಬ ನಿರ್ಧಾರವನ್ನು ವೈದ್ಯರು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡುವುದು ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Every Village in Dakshina Kannada to have Covid-19 Doctors for testing said Mangalore DC Rajendra Kumar to spread the control of Virus.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm