ಬ್ರೇಕಿಂಗ್ ನ್ಯೂಸ್
28-05-21 01:28 pm Mangalore Correspondent ಕರಾವಳಿ
ಮಂಗಳೂರು, ಮೇ 28 : ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಒಂದೇ ಕಡೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಸಿಗುವಂತೆ ಪರೀಕ್ಷೆ ಮತ್ತು ಸ್ಥಳದಲ್ಲಿಯೇ ಚಿಕಿತ್ಸೆ ನೀಡುವುದಕ್ಕಾಗಿ ಹಾಗೂ ಅವಶ್ಯಕತೆಯುಳ್ಳವರಿಗೆ ವೈದ್ಯಕೀಯ ಕಿಟ್ ಗಳನ್ನು ವಿತರಿಸುವುದು ಮುಂತಾದ ಉದ್ದೇಶಗಳಿಗಾಗಿ ಸಂಚಾರಿ ಕ್ಲಿನಿಕ್ ಒಳಗೊಂಡ “ವೈದ್ಯರ ನಡೆ, ಹಳ್ಳಿಗಳ ಕಡೆ" ಎಂಬ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಮಾಡಿದ್ದಾರೆ.
ಸ್ಥಳೀಯ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ವ್ಯಕ್ತಿಗಳನ್ನು ಸಂದರ್ಶಿಸಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ತಪಾಸಣೆಗೆ ಒಳಪಡಿಸಲು ಸಂಚಾರಿ ಕ್ಲಿನಿಕ್ ತಂಡಕ್ಕೆ ಶಿಫಾರಸು ಮಾಡಬೇಕು. ಗ್ರಾಮದ ಪ್ರತಿ ನಾಗರಿಕರೂ ಕೋವಿಡ್ -19 ತಪಾಸಣೆಗೆ ಒಳಪಡಲು ಅನುಕೂಲವಾಗುವಂತೆ “ವೈದ್ಯರ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಪ್ರಾರಂಭಿಸಲು ಕನಿಷ್ಠ ಎರಡು ದಿನಗಳ ಮುಂಚಿತವಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳು ಈ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಪ್ರಚಾರ ನೀಡಬೇಕು. ಮೊಬೈಲ್ ಕ್ಲಿನಿಕ್ ವಾಹನವು ಪ್ರತಿ ದಿನವು 3 ರಿಂದ 4 ಹಳ್ಳಿಗಳಿಗೆ ಭೇಟಿ ನೀಡಿ, ಸ್ಥಳದಲ್ಲಿಯೇ ಕೋವಿಡ್ ತಪಾಸಣೆಯನ್ನು ಕೈಗೊಳ್ಳುವಂತೆ ಗುರಿ ನಿಗದಿಪಡಿಸಿ, ಮುಂದಿನ ಅವಧಿಯಲ್ಲಿ ಯಾವ ಗ್ರಾಮಕ್ಕೆ ಭೇಟಿ ನೀಡಬೇಕು ಎಂಬುದರ ಬಗ್ಗೆ ಯೋಜನೆ ರೂಪಿಸಿಕೊಳ್ಳಬೇಕು.

ತಪಾಸಣೆ ಬಳಿಕ ರೋಗಿ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕೇ ಅಥವಾ ಹೋಂ ಐಸೊಲೇಶನ್ ನಲ್ಲಿರಬೇಕೇ ಎಂಬ ನಿರ್ಧಾರವನ್ನು ವೈದ್ಯರು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡುವುದು ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Every Village in Dakshina Kannada to have Covid-19 Doctors for testing said Mangalore DC Rajendra Kumar to spread the control of Virus.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm