ಬ್ರೇಕಿಂಗ್ ನ್ಯೂಸ್
28-05-21 09:04 pm Mangaluru Correspondent ಕರಾವಳಿ
ಮಂಗಳೂರು, ಮೇ 28: ಮಂಗಳೂರು ನಗರ ಪೊಲೀಸರು ಆರಂಭಿಸಿರುವ ಕೋವಿಡ್ ಸಮನ್ವಯ ಹೆಲ್ಪ್ ಲೈನ್ ಮೂಲಕ 80 ಮಂಗಳಮುಖಿಯರಿಗೆ ಕೋವಿಡ್ ದಿನಸಿ ಕಿಟ್ ವಿತರಿಸಲಾಗಿದೆ. ರಥಬೀದಿಯ ಉದ್ಯಮಿ ವಿಜಯೇಂದ್ರ ಭಟ್ ಕೊಡಮಾಡಿರುವ ಕಿಟ್ ಗಳನ್ನು ಇಂದು ಕಮಿಷನರ್ ಕಚೇರಿಯಲ್ಲಿ ಮಂಗಳಮುಖಿಯರಿಗೆ ವಿತರಣೆ ಮಾಡಲಾಯಿತು.
ತಲಾ ಹತ್ತು ಕೇಜಿ ದಿನಸಿ ಕಿಟ್ ಪ್ರಾಯೋಜಿಸಿದ ವಿಜಯೇಂದ್ರ ಭಟ್ ಅವರನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಭಿನಂದಿಸಿದರು. ಮೇ 21ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಕೋವಿಡ್ ಸಮನ್ವಯ ಎಂಬ ಹೊಸ ಪರಿಕಲ್ಪನೆಯಡಿ ಸಹಾಯವಾಣಿ ಆರಂಭಿಸಲಾಗಿತ್ತು. ಕೋವಿಡ್ ಸಂಕಷ್ಟದಿಂದ ಕಷ್ಟಕ್ಕೆ ಒಳಗಾದವರು, ವಿದೇಶದಲ್ಲಿದ್ದು ಊರಲ್ಲಿ ಕುಟುಂಬಸ್ಥರಿಗೆ ತೊಂದರೆ ಎದುರಾದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸ್ಪಂದಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದರು.
ಅದರಂತೆ, ವಿವಿಧ ಕಡೆಗಳಿಂದ ಕರೆಗಳು ಬಂದಿದ್ದು ಈವರೆಗೆ 24 ಕರೆಗಳಿಗೆ ಸ್ಪಂದಿಸಲಾಗಿದೆ. ಮಂಗಳಮುಖಿಯರ ಸಂಘದ ರಾಜ್ಯ ಘಟಕದಿಂದ ಕರೆ ಮಾಡಿ, ಮಂಗಳೂರಿನಲ್ಲಿರುವ ಮಂಗಳಮುಖಿ ಸದಸ್ಯರು ಕಷ್ಟದಲ್ಲಿರುವ ಬಗ್ಗೆ ಹೇಳಿಕೊಂಡಿದ್ದರು. ಹೀಗಾಗಿ ಉದ್ಯಮಿಗಳ ಮೂಲಕ ಆಹಾರದ ಕಿಟ್ ವಿತರಿಸುವ ಕೆಲಸ ಮಾಡಲಾಗಿದೆ. ವಿಜಯೇಂದ್ರ ಭಟ್ ದಿನಸಿ ಕಿಟ್ ಪ್ರಾಯೋಜಿಸಿದ್ದಾರೆ ಎಂದು ಕಮಿಷನರ್ ಇದೇ ವೇಳೆ ತಿಳಿಸಿದರು.
ಲಾಕ್ಡೌನ್ ಕಾರಣದಿಂದ ಬಹಳಷ್ಟು ಕಷ್ಟದಲ್ಲಿದ್ದೇವೆ. ರಾಜ್ಯ ಸರಕಾರದಿಂದಲೂ ನಮಗೆ ಯಾವುದೇ ಪರಿಹಾರ, ಸೌಲಭ್ಯ ದೊರಕಿಲ್ಲ. ನಮ್ಮ ಕಷ್ಟದ ಬಗ್ಗೆ ತಿಳಿದು ಸ್ಪಂದಿಸಿದ ಮಂಗಳೂರಿನ ಪೊಲೀಸರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಮಂಗಳಮುಖಿ ಹೇಮಾ ತಿಳಿಸಿದರು.
ಈ ಸಂದರ್ಭ ಡಿಸಿಪಿಗಳಾದ ಹರಿರಾಮ್ ಶಂಕರ್, ವಿನಯ ಗಾಂವ್ಕರ್, ಎಸಿಪಿಗಳಾದ ಮಹೇಶ್ ಕುಮಾರ್, ನಟರಾಜ್, ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಉಪಸ್ಥಿತರಿದ್ದರು.
Mangaluru city police commissioner N Shashi Kumar along with DCP (Law and Order) Hariram Shankar, DCP (Crime and Traffic) Vinay A Gaonkar distributed grocery kits to over 80 transgenders in the city on Friday, May 28. The grocery kits were distributed on the premises of the police commissioner's office.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm