ಬ್ರೇಕಿಂಗ್ ನ್ಯೂಸ್
30-05-21 09:35 pm Mangaluru Correspondent ಕರಾವಳಿ
ಉಳ್ಳಾಲ, ಮೇ 30: ಕೊರೊನಾದಿಂದಾಗಿ ಇಡೀ ಸಮಾಜಕ್ಕೆ ಕತ್ತಲೆ ಕವಿದಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದು ಸರಕಾರದ ವ್ಯವಸ್ಥೆಗಳನ್ನ ಪ್ರತಿ ಮನೆ ಬಾಗಿಲಿಗೂ ತಲುಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಏಳು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಭಾನುವಾರ ಕುರ್ನಾಡು, ಇನೋಳಿ, ನಾಟೆಕಲ್, ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಭಿನಂದನೆ ಹಾಗೂ ಪ್ರೋತ್ಸಾಹ ಧನವನ್ನು ವಿತರಿಸಿ ಅವರು ಮಾತನಾಡಿದರು.

ಇಡೀ ವ್ಯವಸ್ಥೆಯನ್ನ ಮನೆ ಮನೆಗೆ ತಲುಪಿಸುವ ಕಾರ್ಯ ಆಶಾ ಕಾರ್ಯಕರ್ತೆಯರಿಂದಲೇ ಸಾಧ್ಯ. ಬೂತ್ ಮಟ್ಟದಲ್ಲೂ ಟಾಸ್ಕ್ ಫೋರ್ಸ್ ಅಗತ್ಯ. ಟಾಸ್ಕ್ ಪೋರ್ಸಿನ ಸದಸ್ಯರೆಲ್ಲರೂ ಎರಡು ದಿವಸಕ್ಕಾದರೂ ಒಟ್ಟು ಸೇರೋ ಅಗತ್ಯವಿದೆ ಎಂದು ಅವರು ಹೇಳಿದರು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ, ನರೇಂದ್ರ ಮೋದಿಯವರು ಕೊರೊನಾದಂತಹ ಸಂದಿಗ್ಧತೆಯ ಕಾಲದಲ್ಲೂ ಉತ್ತಮ ಆಡಳಿತದೊಂದಿಗೆ, ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಲ್ಲದೆ ಕೊರೊನಾ ಸಂಕಷ್ಟ ಕಾಲದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾದದ್ದು. ಸಮಾಜದಲ್ಲಿ ಅವರನ್ನು ಗೌರವಿಸುವ ಕೆಲಸಗಳು ಆಗಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ರಾಜ್ಯ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ , ಮುಖಂಡರಾದ ಯಶವಂತ್ ಅಮೀನ್, ಗಾಯತ್ರಿ ಕಿಶೋರ್, ರಾಮಕೃಷ್ಣ ಪಟ್ಟೋರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ನವೀನ್ ಪಾದಲ್ಪಾಡಿ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುಜಿತ್ ಶೆಟ್ಟಿ ಕಂಬ್ಲಪದವು, ಪ್ರಮುಖರಾದ ಪುರುಷೋತ್ತಮ ಕಲ್ಲಾಪು ಹಾಗೂ ಜೀವನ್ ಕುಮಾರ್ ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು.
Seven years of Modi sarkar Pratap Simha Nayak distributed Financial aid to Asha Workers in Ullal.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am