ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ತೀರ್ಪು ಮುಂದೂಡಿದ ಕೋರ್ಟ್

01-06-21 01:44 pm       Udupi Correspondent   ಕರಾವಳಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪನ್ನು ಜಿಲ್ಲಾ ಸತ್ರ ನ್ಯಾಯಾಲಯ ಜೂನ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಉಡುಪಿ, ಜೂನ್ 01: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪನ್ನು ಜಿಲ್ಲಾ ಸತ್ರ ನ್ಯಾಯಾಲಯ ಜೂನ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಲಾಕ್​ಡೌನ್ ಹಿನ್ನೆಲೆಯಲ್ಲಿ ತೀರ್ಪು ‌ಮುಂದೂಡಿರುವ ನ್ಯಾಯಾಲಯ, ಜೂನ್​ 8ರಂದು ಪ್ರಮುಖ ಆರೋಪಿ ರಾಜೇಶ್ವರಿ ‌ಶೆಟ್ಟಿ ಹಾಗೂ ಸಾಕ್ಷ್ಯ ‌ನಾಶ ಆರೋಪಿ ರಾಘವೇಂದ್ರ ‌ಹಾಜರಾಗಲು ಆದೇಶ ನೀಡಿದೆ.

ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಪ್ರಿಯಕರ ಮತ್ತು ಪುತ್ರನ ಜೊತೆ ಸೇರಿ ಗಂಡನನ್ನು ಕೊಂದು, ಹೋಮಕುಂಡದಲ್ಲಿ ಹಾಕಿ ಸುಟ್ಟ ಪ್ರಕರಣವಿದು. ರಾಜ್ಯಾದ್ಯಂತ ಈ ಕೊಲೆ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು.

ಕೊಲೆ ಪ್ರಕರಣ ಆರೋಪಿಗಳಾದ ನವನೀತ್‌ ಶೆಟ್ಟಿ‌ ಹಾಗೂ‌ ನಿರಂಜನ್ ಜೈಲಿನಲ್ಲಿದ್ದಾರೆ. ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

2016ರ ಜುಲೈ ತಿಂಗಳಲ್ಲಿ ಈ ಭೀಕರ ಕೊಲೆ ನಡೆದಿತ್ತು. ರಾಜೇಶ್ವರಿ ಶೆಟ್ಟಿ, ಪುತ್ರ‌ ನವನೀತ್ ಮತ್ತು ಪ್ರಿಯಕರ ನಿರಂಜನ್ ಜೊತೆ‌ ಸೇರಿ ಭಾಸ್ಕರ ಶೆಟ್ಟಿಯನ್ನು ಮನೆಯಲ್ಲೇ‌ ಹತ್ಯೆ ಮಾಡಿದ್ದರು. ಕಾರಿನಲ್ಲಿ ಪ್ರಿಯಕರನ‌ ಮನೆ ನಂದಳಿಕೆಗೆ ಶವವನ್ನು ತೆಗೆದುಕೊಂಡು ಹೋಗಿ‌ ಹೋಮಕುಂಡದಲ್ಲಿ ಶವವನ್ನು ಸುಟ್ಟು ಹಾಕಿದ್ದರು.

Udupi Bhaskar Shetty Murder case Verdict has been postponed by the court to June 8th. 2016 wife Rajeshwari and Son Killed her Husband and Burt the dead body into Ashes.