ಬ್ರೇಕಿಂಗ್ ನ್ಯೂಸ್
01-06-21 02:06 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂನ್ 1: ಕೊರೊನಾ ಅಟ್ಟಹಾಸ, ಬ್ಲಾಕ್ ಫಂಗಸ್ ಸಂಕಷ್ಟ ಎದುರಾಗಿರುವ ನಡುವೆಯೇ ಸೋಂಕು ಪೀಡಿತ ಮಕ್ಕಳಲ್ಲಿ ಹೊಸ ರೀತಿಯ ರೋಗ ಪರಿಣಾಮ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಎನ್ನುವ ಲಕ್ಷಣಗಳು ಕಂಡುಬರುತ್ತಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ.
ಸಾಮಾನ್ಯವಾಗಿ 12 ವರ್ಷದ ಒಳಗಿನ ಮಕ್ಕಳಲ್ಲಿ ಈ ರೀತಿಯ ಗುಣಲಕ್ಷಣ ರೋಗ ವಾಸಿಯಾದ ಐದಾರು ವಾರಗಳ ಬಳಿಕ ಕಾಣಿಸಿಕೊಳ್ಳುತ್ತಿದೆ. ಈ ರೀತಿಯ ಲಕ್ಷಣವನ್ನು ಮಕ್ಕಳಲ್ಲಿ ಆರಂಭದಲ್ಲೇ ಪತ್ತೆ ಹಚ್ಚದಿದ್ದರೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ವರಿಸಿದ್ದಾರೆ.

ಬ್ಲಾಕ್ ಫಂಗಸ್ ರೀತಿಯಲ್ಲೇ ರೋಗ ನಿರೋಧಕ ಶಕ್ತಿ ಕಡಿಮೆಯಾದ ಕಾರಣ ಕಾಣಿಸಿಕೊಳ್ಳುವ ಅಡ್ಡ ಪರಿಣಾಮ ಇದಾಗಿದ್ದು ಇದರಿಂದ ಮಕ್ಕಳಲ್ಲಿ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಇದನ್ನು ವೈದ್ಯರು ಕವಾಸಕಿ ಸಿಂಡ್ರೋಮ್ ಎಂದು ಹೆಸರಿಸುತ್ತಿದ್ದಾರೆ. ಸೋಂಕು ಆಗಿ ಕೊರೊನಾ ನೆಗೆಟಿವ್ ಬಂದ ಮಕ್ಕಳಲ್ಲೂ ಈ ರೀತಿಯ ಲಕ್ಷಣ ಕಂಡುಬಂದಿದೆ.
ಅತಿಯಾದ ಜ್ವರ, ಕಣ್ಣು ಕೆಂಪಾಗುವುದು, ತುಟಿ, ನಾಲಿಗೆ ಕೆಂಪಾಗುವುದು, ವಾಂತಿ ಭೇದಿ ಕವಾಸಕಿ ಸಿಂಡ್ರೋಮ್ ಗುಣ ಲಕ್ಷಣಗಳು ಎಂದು ವೈದ್ಯರು ಹೇಳುತ್ತಿದ್ದಾರೆ.

ಮಂಗಳೂರಲ್ಲೂ 4 ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಕಂಡುಬಂದಿದ್ದು ಚಿಕಿತ್ಸೆಯ ಬಳಿಕ ಸಂಪೂರ್ಣ ಗುಣಮುಖರಾಗಿ ತೆರಳಿದ್ದಾರೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ಸಿಕ್ಕಿದೆ.
ರೋಗ ಲಕ್ಷಣಗಳ ಬಗ್ಗೆ ಪೋಷಕರು ಜಾಗೃತರಾಗಿದ್ದು ಸಂಶಯ ಕಂಡುಬಂದ ಕೂಡಲೇ ಮಕ್ಕಳ ತಜ್ಞರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
Kawasaki Disease in Infants and Young Children found in Mangalore after Covid and Black fungus. The condition causes inflammation in the blood vessels, and the symptoms can be severe. In addition to several days of fever, children with Kawasaki disease may develop symptoms such as rash, swollen neck glands, swollen hands and feet, and red eyes, lips, and tongue.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm