ಬ್ರೇಕಿಂಗ್ ನ್ಯೂಸ್
29-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 29: ಉಳ್ಳಾಲದ ಕೋಡಿ ಬಳಿಯ ಸೇನೆರೆಬೈಲಿನಲ್ಲಿ ಸ್ಥಳೀಯರ ವಿರೋಧದ ಮಧ್ಯೆ ಭಾರೀ ಪೊಲೀಸ್ ಭದ್ರತೆಯಲ್ಲಿ ದ್ರವ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಏಳು ವರ್ಷಗಳ ಹಿಂದೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ 70 ಕೋಟಿ ಅನುದಾನ ಬಿಡುಗಡೆಗೊಂಡು ನಗರದಾದ್ಯಂತ ಪೈಪ್ ಲೈನ್ ಅಳವಡಿಸಲಾಗಿತ್ತು. ಅದರಂತೆ, ನಗರ ವ್ಯಾಪ್ತಿಯ ಸೇಣೆರೆಬೈಲು, ಕಲ್ಲಾಪು, ಹೊಸಗದ್ದೆ ಎಂಬ ಮೂರು ಪ್ರದೇಶಗಳಲ್ಲಿ ದ್ರವ ತ್ಯಾಜ್ಯ ಸಂಸ್ಕರಣೆ ಮತ್ತು ಶುದ್ದೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸ್ಥಳೀಯ ನಿವಾಸಿಗಳು ದ್ರವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
ಇದೀಗ ಸೇಣೆರೆಬೈಲಿನಲ್ಲಿ ಘಟಕ ನಿರ್ಮಾಣಕ್ಕೆ ಕೋರ್ಟ್ ಅವಕಾಶ ಕೊಟ್ಟಿದ್ದರಿಂದ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿದ್ದು ಘಟಕವನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯ ಮುಖಂಡರ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿತ್ತು. ಆದರೆ ನಗರಸಭೆ ಅಧಿಕಾರಿಗಳು, ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸಿಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.



ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ದ್ರವತ್ಯಾಜ್ಯ ಶುದ್ಧೀಕರಿಸುವ ನಿಟ್ಟಿನಲ್ಲಿ ಸೇನರಬೈಲಿನಲ್ಲಿ ನೂತನ ಘಟಕ ನಿರ್ಮಿಸಲಾಗುತ್ತಿದೆ. ಆದರೆ, ಇದರಿಂದ ಆಗಬಹುದಾದ ತೊಂದರೆಗಳಿಂದ ಆತಂಕಕ್ಕೀಡಾಗಿರುವ ಸ್ಥಳೀಯ ನಿವಾಸಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಿಗದಿತ ಪ್ರದೇಶ ಜನವಸತಿಯಿಂದ ಕೂಡಿದ್ದು 300 ಮೀಟರ್ ಅಂತರದಲ್ಲಿ ಸುಮಾರು ಏಳು ಸಾವಿರ ಜನಸಂಖ್ಯೆ ಇದ್ದಾರೆ. ಮೂರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಆರು ಮಸೀದಿಗಳು, ಮೂರು ದೇವಸ್ಥಾನಗಳಿದ್ದು ಸ್ಥಳ ಗುರುತಿಸುವ ಸಂದರ್ಭ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳೀಯರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿತ್ತು. ಈ ಪ್ರದೇಶದಲ್ಲಿ ಮೀನುಗಾರಿಕಾ ಕಾರ್ಖಾನೆಗಳಿಂದ ಕಲುಷಿತ ನೀರು ಬಿಡಲಾಗುತ್ತಿದ್ದು, ಇದರಿಂದಾಗಿ ಈಗಾಗಲೇ ಪರಿಸರ ಕಲುಷಿತಗೊಂಡಿದೆ. ಒಳಚರಂಡಿ ತ್ಯಾಜ್ಯ ಶುದ್ದೀಕರಣ ಘಟಕ ನಿರ್ಮಾಣಗೊಂಡರೆ ವಾಯು ಮಾಲಿನ್ಯ, ಪರಿಸರ ಮಾಲಿನ್ಯ ಹೆಚ್ಚಾಗಿ ದುರ್ವಾಸನೆಯಿಂದ ಚರ್ಮರೋಗ, ಸಾಂಕ್ರಾಮಿಕ ರೋಗ ಹರಡುವ ಅಪಾಯವಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm