ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.

ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm