ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.
ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
05-02-25 12:29 pm
Bangalore Correspondent
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
Two-wheeler rider fined, Bangalore Traffic: ಎ...
04-02-25 03:09 pm
Cow theft, Mankal Vaidya: ಇನ್ಮುಂದೆ ಗೋಹತ್ಯೆ ನಡ...
04-02-25 12:59 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
04-02-25 07:47 pm
Mangalore Correspondent
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am