ಬ್ರೇಕಿಂಗ್ ನ್ಯೂಸ್
04-06-21 04:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಕೈಮಾಡಿದ್ದ ಆರೋಪದಲ್ಲಿ ಕಂಕನಾಡಿ ಪೊಲೀಸರು ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಠಾಣೆಯ ಮುಂದೆ ಸೇರಿದ್ದು ಪೊಲೀಸರಿಗೆ ಘೆರಾವ್ ಹಾಕಿದ ಘಟನೆ ನಡೆದಿದೆ.
ನಾಗುರಿಯ ಕಂಕನಾಡಿ ನಗರ ಠಾಣೆಯ ಹೊರಭಾಗದಲ್ಲಿ ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದು, ಸುಹೈಲ್ ಕಂದಕ್ ಮೇಲೆ ಪೊಲೀಸರು ಕೈಮಾಡಿ ಎಳಕೊಂಡು ಬಂದಿದ್ದಾರೆಂದು ಆರೋಪಿಸಿ ಘೆರಾವ್ ಹಾಕಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ, ಐವಾನ್ ಡಿಸೋಜ, ಮಿಥುನ್ ರೈ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಕೂಡ ಆಗಮಿಸಿದ್ದು ಸೇರಿರುವ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಸಮಾಧಾನ ಮಾಡುತ್ತಿದ್ದಾರೆ.
ಇಂಡಿಯಾನಾ ಆಸ್ಪತ್ರೆಯಲ್ಲಿ 15 ದಿನಗಳ ಹಿಂದೆ ಕೋರೊನಾ ಸೋಂಕಿತ ರೋಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಅದೇ ದಿನ ಮಧ್ಯರಾತ್ರಿ ವೈದ್ಯರ ಚಿಕಿತ್ಸೆಯ ವೈಫಲ್ಯದಿಂದ ಸಾವು ಆಗಿದೆಯೆಂದು ಸುಹೈಲ್ ಕಂದಕ್ ಮತ್ತು ತಂಡ ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿತ್ತು ಎನ್ನುವ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಸುಹೈಲ್ ಕಂದಕ್ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಆತನನ್ನು ಠಾಣೆಗೆ ಬರುವಂತೆ ಕರೆದಿದ್ದರು. ಆದರೆ, ಆತ ವಿಚಾರಣೆಗೆ ಬಂದಿರಲಿಲ್ಲ. ಇಂದು ಮಧ್ಯಾಹ್ನ ಫಳ್ನೀರ್ ಬಳಿಯಿದ್ದ ಸುಹೈಲ್ ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಬಳಿ ಸೇರಿದ್ದಾರೆ.
Mangalore Congress youth leader Suhail Kandak is taken to custody in connection to creating disruption at Indiana Hospital 14 days back. Hundreds of Youth Congress members and leaders gather at kankanady police station. Commissioner Shashi Kumar and Dcp Hariram Shankar are on the spot.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm