ಬ್ರೇಕಿಂಗ್ ನ್ಯೂಸ್
04-06-21 05:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಕೊರೊನಾ ಲಸಿಕೆಯ ಕೊರತೆಯಿಂದಾಗಿ ಆರೋಗ್ಯ ಕೇಂದ್ರಗಳಲ್ಲಿ ನಿರಂತರ ಎಡವಟ್ಟು ಆಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ನೀಡುವ ಸೂಚನೆಯಿಂದಲೇ ಎಡವಟ್ಟು ಆಗುತ್ತಿದ್ಯಾ ಅಥವಾ ಲಸಿಕೆ ನೀಡುವ ಜವಾಬ್ದಾರಿ ವಹಿಸಿಕೊಂಡ ಸ್ಥಳೀಯ ಸಿಬಂದಿ ಎಡವಟ್ಟು ಮಾಡಿಕೊಳ್ತಿದ್ದಾರೋ ಗೊತ್ತಿಲ್ಲ.. ಜನರು ಮಾತ್ರ ಲಸಿಕೆಯ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದ್ದು ಪ್ರತಿದಿನ ಬೆಳ್ಳಂಬೆಳಗ್ಗೆ ಲಸಿಕಾ ಕೇಂದ್ರಕ್ಕೆ ಬಂದು ಸರತಿ ನಿಲ್ಲುವ ಪ್ರಮೇಯ ಎದುರಾಗಿದೆ.
ಮಂಗಳೂರು ನಗರದ ಗಾಂಧಿನಗರದ ಶಾಲೆಯಲ್ಲಿ ಇಂದು ನಸುಕಿನ ನಾಲ್ಕು ಗಂಟೆಯ ವೇಳೆಗೇ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಸ್ಥಳೀಯ ಕಾರ್ಪೊರೇಟರ್ ಗಣೇಶ್ ಮತ್ತಿತರ ಜನಪ್ರತಿನಿಧಿಗಳು ಮೊದಲು ಬಂದವರಿಗೆ ಲಸಿಕೆ ಎಂದು ಹೇಳಿದ್ದರಿಂದ ನೂರಾರು ಜನರು ನಾಲ್ಕು ಗಂಟೆಯ ಮೊದಲೇ ಬಂದು ಸೇರಿದ್ದರು. ಬೆಳಗ್ಗೆ ಆರು ಗಂಟೆಯ ಹೊತ್ತಿಗೆ 150ಕ್ಕೂ ಹೆಚ್ಚು ಜನರು ಸೇರಿದ್ದರು. ಬೆಳಗ್ಗೆ ಎಂಟೂವರೆ ಗಂಟೆ ಹೊತ್ತಿಗೆ ವೈದ್ಯಾಧಿಕಾರಿಗಳು ಮತ್ತು ಲಸಿಕೆ ನೀಡುವ ಸಿಬಂದಿ ಆಗಮಿಸಿದ್ದು ಇಷ್ಟೊಂದು ಜನರನ್ನು ನೋಡಿ ತಡಬಡಾಯಿಸಿದರು.
ಇಲ್ಲಿ ಸೇರಿದ ಮಾತ್ರಕ್ಕೆ ಯಾರಿಗೂ ಲಸಿಕೆ ನೀಡಲು ಸಾಧ್ಯವಿಲ್ಲ. ನಮಗೆ ಜಿಲ್ಲಾಧಿಕಾರಿಗಳ ಸೂಚನೆ ಇದೆ, ಕೋವಿನ್ ಏಪ್ ನಲ್ಲಿ ರಿಜಿಸ್ಟರ್ ಮಾಡಿ ಟೋಕನ್ ಸಿಕ್ಕಿದ್ದವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಲ್ಲದೆ, ನೋಂದಣಿ ಮಾಡಿದವರಿಗೆ ಮಾತ್ರ ಲಸಿಕೆ ಎಂದು ಅಲ್ಲಿಯೇ ಬೋರ್ಡ್ ಹಾಕಿದ್ರು. ಇದರಿಂದ ಅಲ್ಲಿ ಸೇರಿದ್ದ ಮಂದಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಜನಪ್ರತಿನಿಧಿಗಳು ನಮಗೆ ಮೆಸೇಜ್ ಮಾಡಿದ್ದರಿಂದ ಬಂದು ಸೇರಿದ್ದೆವು. ನೀವು ಈ ತರ ಹೇಳಿದರೆ, ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡುತ್ತಿದ್ದರು.
ಬೆಳ್ಳಂಬೆಳಗ್ಗೆ ಭಾರೀ ಮಳೆಯ ನಡುವೆ ವೃದ್ಧರು, ವಯಸ್ಸಾದ ಮಹಿಳೆಯರು ಕೂಡ ಬಂದು ಸರತಿ ನಿಂತಿದ್ದರು. ಈ ಬಗ್ಗೆ ಸ್ಥಳೀಯ ಮುಖಂಡರಲ್ಲಿ ಪ್ರಶ್ನೆ ಮಾಡಿದರೆ, ಸಾರಿ ಸಾರಿ ಎನ್ನುತ್ತಾ ಕೈಮುಗಿದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದರು. ಗಾಂಧಿನಗರದ ಶಾಲೆಗೆ 150 ಲಸಿಕೆ ಬಂದಿದ್ದು, ಕೋವಿನ್ ಏಪ್ ನಲ್ಲಿ ನೋಂದಣಿ ಮಾಡಿದವರಿಗೆ ಮಾತ್ರ ಕೊಡಲಾಗಿತ್ತು. ಏಪ್ ನಲ್ಲಿ ನೋಂದಣಿ ಮಾಡಿಕೊಂಡವರು ನಿಧಾನಕ್ಕೆ ಬಂದು ಲಸಿಕೆ ಪಡೆದು ಸಾಗುತ್ತಿದ್ದರು.
ಲಸಿಕೆ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳೇ ಜನರನ್ನು ಗೊಂದಲಕ್ಕೆ ದೂಡಿದ್ದರು. ಕಳೆದ ಎರಡು ಮೂರು ಬಾರಿ ಇದೇ ಕೇಂದ್ರದಲ್ಲಿ ಲಸಿಕೆ ನೀಡಲಾಗಿತ್ತು. ಜನರು ನೇರವಾಗಿ ಬಂದು ಆಧಾರ್ ಕಾರ್ಡ್ ತೋರಿಸಿ ಲಸಿಕೆ ಪಡೆಯುತ್ತಿದ್ದರು. ಆದರೆ, ಎರಡು ದಿನಗಳ ಹಿಂದೆ ಜನರು ಹೆಚ್ಚಾಗಿ ಸೇರಿದ್ದಲ್ಲದೆ, ಗಲಾಟೆ ಶುರು ಮಾಡಿದ್ದರು. ಇದರಿಂದಾಗಿ ಆರೋಗ್ಯ ಇಲಾಖೆಯಿಂದಲೇ ಕೋವಿನ್ ಏಪ್ ನೋಂದಣಿ ಮಾಡಿ ಬರುವಂತೆ ಕಡ್ಡಾಯ ಮಾಡಿದ್ದರು. ಈ ವಿಚಾರ ತಿಳಿಯದೆ ಇಂದು ಮತ್ತೆ ಜನರು ಎಡವಟ್ಟು ಮಾಡಿಕೊಂಡಿದ್ದಾರೆ. ಜನಪ್ರತಿನಿಧಿಗಳೇ ಸ್ಥಳೀಯರನ್ನು ಮತ್ತಷ್ಟು ಗೊಂದಲಕ್ಕೆ ತಳ್ಳಿದ್ದರು.
Video:
Hundreds of people stand in a huge crowd for vaccine high drama created in Managudda for vaccines. Old aged people cursed authorities for their negligence.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm