ಬ್ರೇಕಿಂಗ್ ನ್ಯೂಸ್
05-06-21 05:54 pm Udupi Correspondent ಕರಾವಳಿ
ಕಾರ್ಕಳ, ಜೂನ್ 5: 85 ವರ್ಷದ ಅಜ್ಜಿಯನ್ನು ಸ್ವಂತ ಮಗನೇ ಮನೆಯಿಂದ ಹೊರಹಾಕಿದ್ದಲ್ಲದೆ, ಆಕೆಯ ಮೇಲೆ ಹಲ್ಲೆಗೈದ ಘಟನೆ ಕಾರ್ಕಳ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಗಮನಿಸಿ ಅಜ್ಜಿಯನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾಲೂಕಿನ ಕುಂಟಲ್ಪಾಡಿ ಎಂಬಲ್ಲಿನ ಅಶೋಕನಗರದ ಅಂಗನವಾಡಿಯ ಜಗಲಿಯಲ್ಲಿ ಅಜ್ಜಿ ಎರಡು ದಿನಗಳಿಂದ ಅನ್ನ ನೀರಿಲ್ಲದೆ ಮಲಗಿದ್ದರು. ತಲೆಯ ಭಾಗಕ್ಕೆ ಗಾಯಗೊಂಡಿದ್ದ ಅಜ್ಜಿಯನ್ನು ಗಮನಿಸಿದ ಸ್ಥಳೀಯ ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಎಂಬವರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಜ್ಜಿಯನ್ನು ಯಶೋದಾ ಆಚಾರ್ಯ (85) ಎಂದು ಗುರುತಿಸಲಾಗಿದ್ದು, ಆಕೆಯ ಮಗನೇ ಮನೆಯಿಂದ ಹೊರಹಾಕಿದ್ದಾನೆ ಎನ್ನಲಾಗುತ್ತಿದೆ.

ರಮಿತಾ ಕೋವಿಡ್ ಆಹಾರದ ಕಿಟ್ ನೀಡುವುದಕ್ಕಾಗಿ ಮನೆ ಪರಿಸರಕ್ಕೆ ಬಂದಿದ್ದಾಗ, ಅಜ್ಜಿಯನ್ನು ಹೊರಗೆ ಹಾಕಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ಈ ಬಗ್ಗೆ ಮನೆಯಲ್ಲಿ ಕೇಳಿದಾಗ ಸ್ವಂತ ಮಗನೇ ತಾಯಿಯನ್ನು ಮನೆಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾನೆಂದು ತಿಳಿದುಬಂದಿದೆ. ಹೀಗಾಗಿ ಅಜ್ಜಿಯನ್ನು ಆಸ್ಪತ್ರೆಗೆ ಸೇರಿಸಿದ್ದಲ್ಲದೆ, ಒಂದಷ್ಟು ಬಟ್ಟೆಯನ್ನೂ ತೆಗೆದುಕೊಟ್ಟಿದ್ದಾರೆ. ಯಶೋಧಾ ಅವರ ಗಂಡ ಶೀನ ಆಚಾರ್ಯ ಐದು ವರ್ಷಗಳ ಹಿಂದೆ ನಿಧನರಾಗಿದ್ದು ಆಬಳಿಕ ಮಗನ ಜೊತೆ ವಾಸವಿದ್ದರು.
ಅಜ್ಜಿ ಯಶೋಧಾ ಹೇಳುವ ಪ್ರಕಾರ, ಮನೆಯಲ್ಲಿ ಮಗ ಮತ್ತು ಸೊಸೆ ಹೊಡೆಯುತ್ತಿದ್ದರಂತೆ. ಕಟ್ಟಿಗೆಯಲ್ಲಿ ಹೊಡೆದಿದ್ದರಿಂದ ತಲೆಗೆ ಗಾಯವಾಗಿದೆ ಎಂದು ಹೇಳಿದ್ದಾರೆ. ಆದರೆ, ಮಗ ತಾಯಿಗೆ ಹೊಡೆದಿರುವುದನ್ನು ನಿರಾಕರಿಸಿದ್ದಾನೆ. ತಾಯಿ ಮಾನಸಿಕವಾಗಿ ಸ್ಥಿಮಿತ ಕಳಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದಿದ್ದು, ಅದರಿಂದ ತಲೆಗೆ ಪೆಟ್ಟಾಗಿದೆ. ಅಷ್ಟೇನು ದೊಡ್ಡ ಗಾಯ ಆಗಿಲ್ಲದ ಕಾರಣ ಆಸ್ಪತ್ರೆಗೆ ತೋರಿಸಿಲ್ಲ ಎಂದಿದ್ದಾನೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ತಾಯಿ ಮೇಲೆ ಹಲ್ಲೆಗೈದ ಬಗ್ಗೆ ಮಗನ ವಿರುದ್ಧ ಕೇಸು ದಾಖಲಾಗಿದೆ.
In a heartless act, a son did not take his 85-year-old mother, who had received grievous injuries to her head, for medical treatment. A social worker came to the rescue of the elderly woman and got her admitted to the government hospital of the taluk.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm