ಬ್ರೇಕಿಂಗ್ ನ್ಯೂಸ್
05-06-21 11:02 pm Mangaluru Correspondent ಕರಾವಳಿ
ಮಂಗಳೂರು, ಜೂ.5: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. 10 ವರ್ಷ ಪ್ರಾಯದ ರಾಣಿ ಹೆಸರಿನ ಹುಲಿ 3 ಮರಿಗಳಿಗೆ ಜನ್ಮ ನೀಡಿದ್ದು ಆರೋಗ್ಯವಾಗಿದೆ.
ಮರಿಗಳು ಆರೋಗ್ಯದಿಂದಿದ್ದು, 16 ದಿನಗಳಲ್ಲಿ ಕಣ್ಣು ತೆರೆಯಲಿವೆ ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ರಾಣಿ ಹುಲಿಯು 2019ರಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಹಾಗೂ ವಿಜಯ ಎಂಬ ಐದು ಮರಿಗಳಿಗೆ ಜನ್ಮ ನೀಡಿತ್ತು. ಅವುಗಳು ಬೆಳೆದಿದ್ದು, ಇವುಗಳಿಗೆ ಪ್ರತ್ಯೇಕವಾದ ವಾಸದ ಮನೆಯನ್ನು ನಿರ್ಮಿಸಲಾಗಿದೆ. ಅಬುಧಾಬಿಯ ರಾಮದಾಸ ಕಾಮತ್ ದಂಪತಿ 15 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಲು ಸಹಕರಿಸಿದ್ದಾರೆ. ರಾಣಿಯನ್ನು ಈ ಹಿಂದೆ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಮೃಗಾಲಯದಿಂದ ತರಲಾಗಿತ್ತು. ಅದರ ಬದಲಿಗೆ ಗಂಡು ಹುಲಿಯನ್ನು ಇಲ್ಲಿಂದ ನೀಡಲಾಗಿತ್ತು. ಇದೀಗ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 13ಕ್ಕೆ ಏರಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣ ಮೃಗಾಲಯದಿಂದ ತರಿಸಿಕೊಂಡ ಅಳಿವಿನಂಚಿನ ಕಾಡು ಶ್ವಾನಗಳ ವರ್ಗಕ್ಕೆ ಸೇರಿದ ‘ದೋಳ್’ ನಾಯಿ ಇತ್ತೀಚೆಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಇದು ಈ ಹಿಂದೆ ಐದು ಮರಿಗಳಿಗೆ ಜನ್ಮ ನೀಡಿತ್ತು. ಇನ್ನೊಂದು ದೋಳ್ 10 ಮರಿಗಳಿಗೆ ಜನ್ಮ ನೀಡಿತ್ತು. ಇದರೊಂದಿಗೆ ಪಿಲಿಕುಳದಲ್ಲಿ ದೋಳ್ ಕಾಡು ಶ್ವಾನಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ರಿಯಾ ಪಕ್ಷಿಯ ಜನನ
ಉಷ್ಟ್ರ ಪಕ್ಷಿಯ ವರ್ಗಕ್ಕೆ ಸೇರಿದ ಬಿಳಿ ರಿಯಾ ಮೊಟ್ಟೆಗಳನ್ನಿಟ್ಟಿದ್ದು ಅವುಗಳಿಗೆ ಕಾವು ಕೊಡಲಾಗುತ್ತಿದೆ. ಅದರಲ್ಲಿ ಈಗಾಗಲೇ ಒಂದು ಬಿಳಿ ರಿಯಾ ಮೊಟ್ಟೆಯೊಡೆದು ಹೊರಬಂದಿದೆ. ಎರಡು ಬಿಳಿ ಮತ್ತು ಎರಡು ಕಂದು ರಿಯಾಗಳನ್ನು ಪ್ರಾಣಿ ವಿನಿಮಯದಡಿ ಕೇರಳದ ತಿರುವನಂತಪುರದಿಂದ ತರಲಾಗಿತ್ತು.
ಅಪರೂಪದ ರೆಟಿಕ್ಯುಲೇಟೆಡ್ ಹೆಬ್ಬಾವು ಸುಮಾರು 20 ಮೊಟ್ಟೆಗಳನ್ನಿಟ್ಟು ಕಾವು ನೀಡುತ್ತಿದೆ. ಇದೇ ಹೆಬ್ಬಾವು ಕಳೆದ ಸಾಲಿನಲ್ಲಿ 17 ಮರಿಗಳಿಗೆ ಜನ್ಮ ನೀಡಿತ್ತು. ಈ ಹೆಬ್ಬಾವು ನಿಕೊಬಾರ್ನಲ್ಲಿ ಕಾಣ ಸಿಗುತ್ತಿದ್ದು ಅಳಿವಿನಂಚಿನಲ್ಲಿದೆ ಎನ್ನಲಾಗುತ್ತಿದೆ.
ಇದೇ ವೇಳೆ, ಪಿಲಿಕುಳ ಮೃಗಾಲಯದಲ್ಲಿ ಕಾಳಿಂಗ ಸಂತಾನಭಿವೃದ್ಧಿಯನ್ನೂ ಮಾಡಿದೆ. ದೇಶದಲ್ಲೇ ಹೆಸರು ಮಾಡಿದ್ದ ‘ನಾಗಮಣಿ’ ಕಾಳಿಂಗವು ಆರು ಮೊಟ್ಟೆಗಳನ್ನಿಟ್ಟಿದ್ದು ಕೃತಕ ಕಾವು ಕೊಡಲಾಗುತ್ತಿದೆ. ಪಿಲಿಕುಳದಲ್ಲಿ ಒಟ್ಟು 19 ಕಾಳಿಂಗ ಸರ್ಪಗಳಿವೆ.
ಕೊರೊನಾ ಅನ್ಲಾಕ್ ಬಳಿಕ ಚೆನ್ನೈನ ವಂಡಲೂರು ಮೃಗಾಲಯದಿಂದ ಬಿಳಿ ಹುಲಿಯನ್ನು ತರಿಸಲಾಗುವುದು. ಪ್ರಾಣಿ ವಿನಿಮಯದಲ್ಲಿ ನಂದನಕಾನನ್, ಸೂರತ್ ಮತ್ತು ಹೈದರಾಬಾದ್ ಮೃಗಾಲಯದಿಂದ ಕೆಲವು ಪ್ರಾಣಿ ಪಕ್ಷಿಗಳನ್ನು ತರುವ ಬಗ್ಗೆ ಕಾರ್ಯಕ್ರಮ ಇದೆ ಎಂದು ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
Mangaluru Animals flourish in covid times. While Tiger 'Rani' gave birth to 3 cubs, a dhole littered seven pups at Pilikula Zoo recently. A rhea chick was hatched in an incubator
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm