ಬ್ರೇಕಿಂಗ್ ನ್ಯೂಸ್
06-06-21 04:55 pm Sandesh, Puttur ಕರಾವಳಿ
Photo credits : Oneindia Kannada
ಮಂಗಳೂರು, ಜೂ.6: ಲಾಕ್ಡೌನ್ ಬಿಸಿ ಕೂಲಿ ಮಾಡಿ ಬದುಕುವ ಜನಸಾಮಾನ್ಯರಿಗೆ ಮಾತ್ರ ತಟ್ಟಿದ್ದಲ್ಲ. ಬೀದಿಯಲ್ಲಿ ಅಲೆಯುವ ನಾಯಿಗಳಿಗೂ ತಟ್ಟಿದೆ. ನಗರ ಭಾಗದಲ್ಲಿ ಅದೆಷ್ಟೋ ನಾಯಿಗಳು ಆಹಾರ ಇಲ್ಲದೆ ಬಸವಳಿಯುವ ಸನ್ನಿವೇಶ ನಿರ್ಮಾಣವಾಗಿದೆ. ಆದರೆ, ಪುತ್ತೂರು ಪೇಟೆಯಲ್ಲಿ ಮಾತ್ರ ಬೀದಿ ನಾಯಿಗಳಿಗೆ ಈ ಬಾರಿ ಲಾಕ್ಡೌನ್ ಬಿಸಿಯೇ ತಟ್ಟಿಲ್ಲ.
ಪುತ್ತೂರು ನಗರದಲ್ಲಿ 150ಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು ಎಲ್ಲದಕ್ಕೂ ಸಮಯಕ್ಕೆ ಸರಿಯಾಗಿ ಆಹಾರ ಪೂರೈಕೆಯಾಗುತ್ತಿದೆ. ಹೌದು, ನಾಯಿಗಳಿಗೂ ಜೀವ ಇದೆ ಎಂದು ಕಾಲ ಕಾಲಕ್ಕೆ ಆಹಾರ ಪೂರೈಕೆ ಮಾಡುತ್ತಾ ಸುದ್ದಿಯಾದವರು ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು.
ಇವರು ತಮ್ಮ ಮನೆಯಲ್ಲೇ ನಾಯಿಗಳಿಗೆ ಆಹಾರವನ್ನು ತಯಾರಿಸುತ್ತಾರೆ. ದ್ವಿಚಕ್ರ ವಾಹನದಲ್ಲಿ ನಗರದ ತುಂಬೆಲ್ಲಾ ಓಡಾಡಿ ನಾಯಿಗಳಿಗೆ ಆಹಾರ ಪೂರೈಕೆಯನ್ನು ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಈ ಕಾಯಕವನ್ನು ರಾತ್ರಿ ಸಮಯದಲ್ಲಿ ಮಾಡುತ್ತಾ ಬಂದಿದ್ದ ರಾಜೇಶ್ ಬನ್ನೂರು ಲಾಕ್ಡೌನ್ ಕಾರಣದಿಂದಾಗಿ ನಾಯಿಗಳಿಗೆ ಆಹಾರ ನೀಡಲು ಸಂಜೆಯೇ ಹೊರಡುತ್ತಾರೆ. ರಾತ್ರಿ 11 ಗಂಟೆಯ ವರೆಗೆ ಆಹಾರ ನೀಡುತ್ತಾ ಮುಂದುವರಿಯುವ ಇವರ ದಾರಿಯನ್ನೇ ಕಾಯುವ ನೂರಾರು ನಾಯಿಗಳು ಪುತ್ತೂರಿನಲ್ಲಿವೆ.
ಬೀದಿ ನಾಯಿಗಳನ್ನು ಒಂದು ಕಡೆ ಸೇರಿಸಿ ಅವುಗಳಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂಬ ಆಶಯವೂ ರಾಜೇಶ್ ಬನ್ನೂರು ಅವರದ್ದಾಗಿದೆ. ಅದಕ್ಕಾಗಿ ಸರಕಾರವೇನಾದರೂ ಭೂಮಿಗ ನೀಡಿದಲ್ಲಿ ಸಣ್ಣ ಮಟ್ಟಿನ ಶೆಡ್ ನಿರ್ಮಿಸಿ ಬೀದಿ ನಾಯಿಗಳನ್ನು ಸಾಕಬೇಕೆನ್ನುವ ಇವರ ಆಶಯವೂ ಇವರದ್ದಿದೆ.
ನಗರಸಭೆಯ ಸದಸ್ಯತ್ವದ ಜೊತೆಗೆ ಪತ್ರಿಕಾ ಏಜೆಂಟ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವ ರಾಜೇಶ್ ಬನ್ನೂರು ಅವರ ಶ್ವಾನ ಪ್ರೇಮಕ್ಕೆ ಪುತ್ತೂರಿನ ಎರಡು ಹೊಟೇಲ್ ಗಳು ಹಾಗೂ ಇಬ್ಬರು ಮುಸ್ಲಿಂ ಬಂಧುಗಳು ತಿಂಡಿ ಮತ್ತು ಇತರ ರೂಪದಲ್ಲಿ ಸಹಕಾರ ನೀಡುತ್ತಿದ್ದಾರೆ.
Luckily more than 150 street dogs of the town have a human being who takes care of them. They get food on time. The person who loves these street canines is none other than Rajesh Bannur, former president of Puttur town municipality. He was the member of town municipality for 20 long years.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm