ಬ್ರೇಕಿಂಗ್ ನ್ಯೂಸ್
06-06-21 04:55 pm Sandesh, Puttur ಕರಾವಳಿ
Photo credits : Oneindia Kannada
ಮಂಗಳೂರು, ಜೂ.6: ಲಾಕ್ಡೌನ್ ಬಿಸಿ ಕೂಲಿ ಮಾಡಿ ಬದುಕುವ ಜನಸಾಮಾನ್ಯರಿಗೆ ಮಾತ್ರ ತಟ್ಟಿದ್ದಲ್ಲ. ಬೀದಿಯಲ್ಲಿ ಅಲೆಯುವ ನಾಯಿಗಳಿಗೂ ತಟ್ಟಿದೆ. ನಗರ ಭಾಗದಲ್ಲಿ ಅದೆಷ್ಟೋ ನಾಯಿಗಳು ಆಹಾರ ಇಲ್ಲದೆ ಬಸವಳಿಯುವ ಸನ್ನಿವೇಶ ನಿರ್ಮಾಣವಾಗಿದೆ. ಆದರೆ, ಪುತ್ತೂರು ಪೇಟೆಯಲ್ಲಿ ಮಾತ್ರ ಬೀದಿ ನಾಯಿಗಳಿಗೆ ಈ ಬಾರಿ ಲಾಕ್ಡೌನ್ ಬಿಸಿಯೇ ತಟ್ಟಿಲ್ಲ.
ಪುತ್ತೂರು ನಗರದಲ್ಲಿ 150ಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು ಎಲ್ಲದಕ್ಕೂ ಸಮಯಕ್ಕೆ ಸರಿಯಾಗಿ ಆಹಾರ ಪೂರೈಕೆಯಾಗುತ್ತಿದೆ. ಹೌದು, ನಾಯಿಗಳಿಗೂ ಜೀವ ಇದೆ ಎಂದು ಕಾಲ ಕಾಲಕ್ಕೆ ಆಹಾರ ಪೂರೈಕೆ ಮಾಡುತ್ತಾ ಸುದ್ದಿಯಾದವರು ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು.

ಇವರು ತಮ್ಮ ಮನೆಯಲ್ಲೇ ನಾಯಿಗಳಿಗೆ ಆಹಾರವನ್ನು ತಯಾರಿಸುತ್ತಾರೆ. ದ್ವಿಚಕ್ರ ವಾಹನದಲ್ಲಿ ನಗರದ ತುಂಬೆಲ್ಲಾ ಓಡಾಡಿ ನಾಯಿಗಳಿಗೆ ಆಹಾರ ಪೂರೈಕೆಯನ್ನು ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಈ ಕಾಯಕವನ್ನು ರಾತ್ರಿ ಸಮಯದಲ್ಲಿ ಮಾಡುತ್ತಾ ಬಂದಿದ್ದ ರಾಜೇಶ್ ಬನ್ನೂರು ಲಾಕ್ಡೌನ್ ಕಾರಣದಿಂದಾಗಿ ನಾಯಿಗಳಿಗೆ ಆಹಾರ ನೀಡಲು ಸಂಜೆಯೇ ಹೊರಡುತ್ತಾರೆ. ರಾತ್ರಿ 11 ಗಂಟೆಯ ವರೆಗೆ ಆಹಾರ ನೀಡುತ್ತಾ ಮುಂದುವರಿಯುವ ಇವರ ದಾರಿಯನ್ನೇ ಕಾಯುವ ನೂರಾರು ನಾಯಿಗಳು ಪುತ್ತೂರಿನಲ್ಲಿವೆ.
ಬೀದಿ ನಾಯಿಗಳನ್ನು ಒಂದು ಕಡೆ ಸೇರಿಸಿ ಅವುಗಳಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂಬ ಆಶಯವೂ ರಾಜೇಶ್ ಬನ್ನೂರು ಅವರದ್ದಾಗಿದೆ. ಅದಕ್ಕಾಗಿ ಸರಕಾರವೇನಾದರೂ ಭೂಮಿಗ ನೀಡಿದಲ್ಲಿ ಸಣ್ಣ ಮಟ್ಟಿನ ಶೆಡ್ ನಿರ್ಮಿಸಿ ಬೀದಿ ನಾಯಿಗಳನ್ನು ಸಾಕಬೇಕೆನ್ನುವ ಇವರ ಆಶಯವೂ ಇವರದ್ದಿದೆ.
ನಗರಸಭೆಯ ಸದಸ್ಯತ್ವದ ಜೊತೆಗೆ ಪತ್ರಿಕಾ ಏಜೆಂಟ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವ ರಾಜೇಶ್ ಬನ್ನೂರು ಅವರ ಶ್ವಾನ ಪ್ರೇಮಕ್ಕೆ ಪುತ್ತೂರಿನ ಎರಡು ಹೊಟೇಲ್ ಗಳು ಹಾಗೂ ಇಬ್ಬರು ಮುಸ್ಲಿಂ ಬಂಧುಗಳು ತಿಂಡಿ ಮತ್ತು ಇತರ ರೂಪದಲ್ಲಿ ಸಹಕಾರ ನೀಡುತ್ತಿದ್ದಾರೆ.
Luckily more than 150 street dogs of the town have a human being who takes care of them. They get food on time. The person who loves these street canines is none other than Rajesh Bannur, former president of Puttur town municipality. He was the member of town municipality for 20 long years.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm