ಬ್ರೇಕಿಂಗ್ ನ್ಯೂಸ್
08-06-21 01:59 pm Udupi Correspondent ಕರಾವಳಿ
ಉಡುಪಿ, ಜೂನ್ 8: ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ.
ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದ್ದು, ಬದುಕಿರುವವರೆಗೂ ಆರೋಪಿಗಳು ಜೈಲಿನಲ್ಲಿ ಕೊಳೆಯಬೇಕಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜೂನ್ ೮ಕ್ಕೆ ಶಿಕ್ಷೆ ತೀರ್ಪು ಪ್ರಕಟ ದಿನಾಂಕ ಮುಂದೂಡಲಾಗಿತ್ತು. ಮೂರು ಪ್ರಮುಖ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.
ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದು, ಭಾಸ್ಕರ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ಗೆ ಶಿಕ್ಷೆ ತೀರ್ಪು ನೀಡಿದ್ದು, ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ;
2016, ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಬಳಿಕ ಮೃತದೇಹವನ್ನು ಹೋಮಕುಂಡಕ್ಕೆ ಹಾಕಿ ಸುಟ್ಟುಹಾಕಲಾಗಿತ್ತು.
ಭಾಸ್ಕರ್ ಶೆಟ್ಟಿ ಅವರ ತಾಯಿ ಗುಲಾಬಿ ಶೆಟ್ಟಿ ಅವರು ಮಣಿಪಾಲ ಠಾಣೆಗೆ ನೀಡಿದ ನಾಪತ್ತೆ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ, ನಂದಳಿಕೆಯ ನಿರಂಜನ ಭಟ್ ಹಾಗೂ ಸಾಕ್ಷ್ಯ ನಾಶ ಆರೋಪದ ಮೇಲೆ ಶ್ರೀನಿವಾಸ್ ಭಟ್ ಹಾಗೂ ರಾಘವೇಂದ್ರನನ್ನು ಬಂಧಿಸಿದ್ದರು.
ಕೊಲೆ ಪ್ರಕರಣದಲ್ಲಿ ರಾಜೇಶ್ವರಿ ಶೆಟ್ಟಿ ಜಾಮೀನಿನ ಮೇಲೆ ಬಿಡುಗಡೆಯಾದರೆ, ನವನೀತ ಶೆಟ್ಟಿ ಹಾಗೂ ನಿರಂಜನ್ ಭಟ್ ಜೈಲಿನಲ್ಲಿದ್ದರು.
The cold-blooded murder of the NRI entrepreneur from Indrali here, Bhaskar Shetty (52), had sent shock waves through the state. Shetty allegedly was killed, his body was cut into pieces and burnt on a platform meant for holding sacrificial fires. After a prolonged hearing, the district and sessions court here pronounced its judgment in the case on Tuesday, June 8. The court held three persons including the wife and son of the deceased as guilty of murder and awarded them life imprisonment.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm