ಬ್ರೇಕಿಂಗ್ ನ್ಯೂಸ್
09-06-21 10:41 pm Mangaluru Correspondent ಕರಾವಳಿ
ಮಂಗಳೂರು, ಜೂನ್ 9: ಸುರತ್ಕಲ್ ಸಮೀಪದ ಸೂರಿಂಜೆ ಮತ್ತು ಕುತ್ತೆತ್ತೂರಿನಲ್ಲಿ ಭತ್ತದ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಭತ್ತದ ಬೀಜಗಳು ಮೊಳಕೆ ಹಂತದಲ್ಲಿ ಸುಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು ಎಂಆರ್ ಪಿಎಲ್ ನಿಂದ ಹರಿದು ಬಂದ ಕೆಮಿಕಲ್ ಯುಕ್ತ ನೀರು ಇದಕ್ಕೆ ಕಾರಣ ಎಂದು ಸ್ಥಳೀಯರು ಭೀತಿ ವ್ಯಕ್ತಪಡಿಸಿದ್ದಾರೆ.
ಬೊಳ್ಳಾರ ಗುತ್ತಿನ ಪ್ರಕಾಶ್ ಶೆಟ್ಟಿ ಎಂಬವರು ಕೃಷಿ ಇಲಾಖೆಯಿಂದ ಪಡೆದ ಭತ್ತವನ್ನು ಮೊಳಕೆ ಬರಿಸಿ ಬಿತ್ತನೆ ಮಾಡಿದ್ದರು. ಇನ್ನೋರ್ವ ರೈತ ತಾವೇ ಸಿದ್ಧಪಡಿಸಿದ ಭತ್ತವನ್ನು ಮೊಳಕೆ ಬರಿಸಿ ಗದ್ದೆಯಲ್ಲಿ ಬಿತ್ತಿದ್ದರು. ಇಬ್ಬರು ರೈತರು ಬಿತ್ತಿದ ಬೀಜವೂ ಸುಟ್ಟು ಹೋಗಿದ್ದು ಕಪ್ಪಾಗಿ ಹೋಗಿದೆ.

ಎಂಆರ್ ಪಿಎಲ್ ಬಳಿಯ ಮೂಡುಪದವು ಸಮೀಪ ಒಸರುವ ತ್ಯಾಜ್ಯ ನೀರು ಕುತ್ತೆತ್ತೂರು ಮೂಲಕ ಹರಿದು ಸೂರಿಂಜೆಗೆ ಬರುತ್ತದೆ. ಇದರ ಪರಿಣಾಮ ಈ ಭಾಗದಲ್ಲಿ ಕೃಷಿಗೆ ತೊಂದರೆಯಾಗಿ ರೈತರು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ. ಈಗ ಸೂರಿಂಜೆಯ ರೈತರು ಮಾಡಿದ ಕೃಷಿ ಸುಟ್ಟು ಹೋಗಿದ್ದು ಹಾಳಾಗಿದೆ.
ಇತ್ತೀಚೆಗೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಳದ ಬಳಿ ನೀರಿನಲ್ಲಿ ತೈಲದ ಅಂಶ ಕಂಡುಬಂದಿದ್ದು, ಬಾವಿ, ಕೆರೆಯ ಮೀನುಗಳು ಸತ್ತಿದ್ದವು. ಇಲ್ಲಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆದರೆ ಅದರ ಫಲಿತಾಂಶ ಇನ್ನೂ ಜನತೆಗೆ ತಿಳಿದಿಲ್ಲ ಎಂಬ ಅಸಮಾಧಾನವನ್ನು ರೈತರು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳಲ್ಲಿ ಕೇಳಿದರೆ ತಮಗೇನೂ ಗೊತ್ತಿಲ್ಲ ಎಂದು ನುಣುಚಿಕೊಳ್ಳುತ್ತಿದ್ದಾರೆ. ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯ ಕೃಷಿಕರಿಗೆ ಹಾನಿಯಾಗುತ್ತಿರುವ ಬಗ್ಗೆ ಪಂಚಾಯತ್ ನಲ್ಲಿ ಹೇಳಿಕೊಂಡರೂ, ಕೈಗಾರಿಕೆಯ ಮಾಲಿನ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಂಚಾಯತ್ ಅಧಿಕಾರಿಗಳ ಈ ರೀತಿಯ ನಿರ್ಲಕ್ಷ್ಯದಿಂದಾಗಿಯೇ ಎಂಆರ್ ಪಿಎಲ್ ಸೊಕ್ಕು ತೋರಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
MRPL Dump dirty wastewater Crops Burnt in Mangalore. The Pictures of this has gone viral on Social Media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm