ಬ್ರೇಕಿಂಗ್ ನ್ಯೂಸ್
10-06-21 01:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಕಡೆಗೂ ಈ ಬಾರಿ ಲಾಕ್ಡೌನ್ ತೆರವಾಗುತ್ತೆ ಎಂದು ಆಸೆಯಿಂದ ಕಾದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ನಿರಾಶೆಯ ಸುದ್ದಿ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ವಿಸ್ತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳೊಂದಿಗೆ ಸಿಎಂ ಸಭೆ ನಡೆಸಿದ್ದು ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹತೋಟಿಗೆ ಬರದ ಕಾರಣ ಮತ್ತೆ ಒಂದು ವಾರ ಲಾಕ್ಡೌನ್ ವಿಸ್ತರಣೆಗೆ ಮನವಿ ಮಾಡಿದ್ದೇವೆ. ಇದರ ಜೊತೆಗೆ, ನಮ್ಮ ಜಿಲ್ಲೆಗೆ ವ್ಯಾಕ್ಸಿನ್ ಪ್ರಮಾಣವನ್ನೂ ಹೆಚ್ಚಿಸಲು ಬೇಡಿಕೆ ನೀಡಿದ್ದೇವೆ. ಆಯಾ ಜಿಲ್ಲೆಗಳಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು ಜೂನ್ 14 ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.


ಇದೇ ವೇಳೆ, ಕೈಗಾರಿಕೆಗಳಿಗೆ ಸ್ವಲ್ಪ ಮಟ್ಟದ ರಿಯಾಯಿತಿ ನೀಡಿ ಲಾಕ್ ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ನಾಳೆ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರ ಸಭೆ ಕರೆದು ಜಿಲ್ಲಾ ಮಟ್ಟದಲ್ಲಿ ನಿರ್ಣಯ ಮಾಡಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮಾಹಿತಿ ನೀಡಿದ್ದಾರೆ.
Spike in Covid Cases Lockdown Extended in Dakshina Kannada till 20th June. The decision was taken by Mangaluru DC Dr. Rajendra Kumar. The decision was taken after a Video conference with CM of Karnataka. Eight districts have got the order for extension of Lockdown for a week from June 14th.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm