ಬ್ರೇಕಿಂಗ್ ನ್ಯೂಸ್
10-06-21 01:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಕಡೆಗೂ ಈ ಬಾರಿ ಲಾಕ್ಡೌನ್ ತೆರವಾಗುತ್ತೆ ಎಂದು ಆಸೆಯಿಂದ ಕಾದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ನಿರಾಶೆಯ ಸುದ್ದಿ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ವಿಸ್ತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳೊಂದಿಗೆ ಸಿಎಂ ಸಭೆ ನಡೆಸಿದ್ದು ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹತೋಟಿಗೆ ಬರದ ಕಾರಣ ಮತ್ತೆ ಒಂದು ವಾರ ಲಾಕ್ಡೌನ್ ವಿಸ್ತರಣೆಗೆ ಮನವಿ ಮಾಡಿದ್ದೇವೆ. ಇದರ ಜೊತೆಗೆ, ನಮ್ಮ ಜಿಲ್ಲೆಗೆ ವ್ಯಾಕ್ಸಿನ್ ಪ್ರಮಾಣವನ್ನೂ ಹೆಚ್ಚಿಸಲು ಬೇಡಿಕೆ ನೀಡಿದ್ದೇವೆ. ಆಯಾ ಜಿಲ್ಲೆಗಳಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು ಜೂನ್ 14 ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಕೈಗಾರಿಕೆಗಳಿಗೆ ಸ್ವಲ್ಪ ಮಟ್ಟದ ರಿಯಾಯಿತಿ ನೀಡಿ ಲಾಕ್ ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ನಾಳೆ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರ ಸಭೆ ಕರೆದು ಜಿಲ್ಲಾ ಮಟ್ಟದಲ್ಲಿ ನಿರ್ಣಯ ಮಾಡಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮಾಹಿತಿ ನೀಡಿದ್ದಾರೆ.
Spike in Covid Cases Lockdown Extended in Dakshina Kannada till 20th June. The decision was taken by Mangaluru DC Dr. Rajendra Kumar. The decision was taken after a Video conference with CM of Karnataka. Eight districts have got the order for extension of Lockdown for a week from June 14th.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm