ಬ್ರೇಕಿಂಗ್ ನ್ಯೂಸ್
10-06-21 05:51 pm Udupi Correspondent ಕರಾವಳಿ
ಉಡುಪಿ, ಜೂನ್ 10: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಪದ್ದು ಬಂಗೇರಾ (74) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈನಲ್ಲಿ ನೆಲೆಸಿದ್ದ ಶೇಖರ್ ಬಂಗೇರ ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಉಡುಪಿ ತಾಲೂಕಿನ ಬಡಾನಿಡಿಯೂರು ಮೂಲದ ಬಂಗೇರ ಅವರಿಗೆ ಕೋವಿಡ್ ಸೋಂಕು ತಗಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.
ಚಿಕ್ಕಂದಿನಲ್ಲೇ ಮುಂಬೈಗೆ ತೆರಳಿ ಜೀವನ ರೂಪಿಸಿದ್ದ ಶೇಖರ್ ಬಂಗೇರ ಫುಟ್ಬಾಲ್ ಆಟದಲ್ಲಿ ಮಿಂಚು ಹರಿಸಿದ್ದರು. ಎಂಬತ್ತರ ದಶಕದಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ, ಗೋಲ್ ಕೀಪರ್ ಮತ್ತು ನಾಯಕನಾಗಿಯೂ ಗಮನ ಸೆಳೆದಿದ್ದರು. ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿ ಹಲವು ಫುಟ್ಬಾಲ್ ಕ್ಲಬ್ ಗಳಿಗೆ ಕೋಚ್ ಆಗಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ವಿಕ್ಟೋರಿಯಾ ಫುಟ್ಬಾಲ್ ಅಕಾಡೆಮಿಯ ಟ್ರಸ್ಟಿ ಕ್ಲೈವ್ ನೋಲನ್ ಮಸ್ಕರೇನಸ್ ಮತ್ತು ತರಬೇತುದಾರ ಮಿಲನ್ ಸೇರಿದಂತೆ ಸಂಬಂಧಿಕರು ಮತ್ತು ಸೀಮಿತ ಸಂಖ್ಯೆಯ ಅಭಿಮಾನಿಗಳು ಅಂತ್ಯದ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
Shekhar Paddu Bangera (74), former captain of the Indian football team, fell victim to a coronavirus infection on Thursday, June 10. Bangera had recently been infected with the disease. He was admitted into Mahesh Hospital Brahmavar for treatment. But the treatments failed to save his life.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm