ಬ್ರೇಕಿಂಗ್ ನ್ಯೂಸ್
10-06-21 05:51 pm Udupi Correspondent ಕರಾವಳಿ
ಉಡುಪಿ, ಜೂನ್ 10: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಪದ್ದು ಬಂಗೇರಾ (74) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈನಲ್ಲಿ ನೆಲೆಸಿದ್ದ ಶೇಖರ್ ಬಂಗೇರ ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಉಡುಪಿ ತಾಲೂಕಿನ ಬಡಾನಿಡಿಯೂರು ಮೂಲದ ಬಂಗೇರ ಅವರಿಗೆ ಕೋವಿಡ್ ಸೋಂಕು ತಗಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.


ಚಿಕ್ಕಂದಿನಲ್ಲೇ ಮುಂಬೈಗೆ ತೆರಳಿ ಜೀವನ ರೂಪಿಸಿದ್ದ ಶೇಖರ್ ಬಂಗೇರ ಫುಟ್ಬಾಲ್ ಆಟದಲ್ಲಿ ಮಿಂಚು ಹರಿಸಿದ್ದರು. ಎಂಬತ್ತರ ದಶಕದಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ, ಗೋಲ್ ಕೀಪರ್ ಮತ್ತು ನಾಯಕನಾಗಿಯೂ ಗಮನ ಸೆಳೆದಿದ್ದರು. ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿ ಹಲವು ಫುಟ್ಬಾಲ್ ಕ್ಲಬ್ ಗಳಿಗೆ ಕೋಚ್ ಆಗಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ವಿಕ್ಟೋರಿಯಾ ಫುಟ್ಬಾಲ್ ಅಕಾಡೆಮಿಯ ಟ್ರಸ್ಟಿ ಕ್ಲೈವ್ ನೋಲನ್ ಮಸ್ಕರೇನಸ್ ಮತ್ತು ತರಬೇತುದಾರ ಮಿಲನ್ ಸೇರಿದಂತೆ ಸಂಬಂಧಿಕರು ಮತ್ತು ಸೀಮಿತ ಸಂಖ್ಯೆಯ ಅಭಿಮಾನಿಗಳು ಅಂತ್ಯದ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
Shekhar Paddu Bangera (74), former captain of the Indian football team, fell victim to a coronavirus infection on Thursday, June 10. Bangera had recently been infected with the disease. He was admitted into Mahesh Hospital Brahmavar for treatment. But the treatments failed to save his life.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am