ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am