ಬ್ರೇಕಿಂಗ್ ನ್ಯೂಸ್
12-06-21 04:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಅಸಂಘಟಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿಯಲ್ಲಿರುವ ಮಂದಿಗೆ ರಾಜ್ಯ ಸರಕಾರದ ಪರಿಹಾರ ಪ್ಯಾಕೇಜ್ ಕೈಗೆಟಕದಂತಾಗಿದೆ. ಟೈಲರ್ ಕೆಲಸ ಮಾಡುವ ಮಂದಿ ತಾವು ಅಸಂಘಟಿತ ಕಾರ್ಮಿಕರು ಎಂದು ತೋರಿಸಲು ಸರಕಾರ ಸೂಚಿಸಿದ ಅಧಿಕಾರಿಗಳ ಬಳಿ ತೆರಳಿದರೆ, ನೀವು ಲೈಸೆನ್ಸ್ ಮಾಡಿದ್ದೀರಾ ಎಂದು ಕೇಳುತ್ತಾರೆ. ನಾವು ಮನೆಯಲ್ಲೇ ಕೆಲಸ ಮಾಡುವುದಾಗಿ ಹೇಳಿದರೂ ವಾಪಸ್ ಕಳುಹಿಸುತ್ತಾರೆ. ಇದರಿಂದಾಗಿ ಟೈಲರ್ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಅನ್ನೋದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು ಈ ಕುರಿತ ಗೊಂದಲವನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆನಂದ ಕೆ.ಎಸ್. ಸರಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕೋವಿಡ್ನಿಂದಾಗಿ ಟೈಲರ್ಗಳು ಅಂಗಡಿ ಬಾಗಿಲು ತೆರೆಯದೆ ಮನೆಯಲ್ಲಿಯೇ ಉಳಿಯುವಂತಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸರಕಾರ ಘೋಷಣೆ ಮಾಡಿದ ಪ್ಯಾಕೇಜ್ ಮೊತ್ತ ಎರಡು ಸಾವಿರ ರೂಪಾಯಿಯನ್ನು ಪಡೆಯಲು ಎಪಿಎಲ್ ಮತ್ತು ಬಿಪಿಎಲ್ ಎಂಬ ಮಾನದಂಡವನ್ನು ನಿಗದಿ ಪಡಿಸಿರುವುದು ತಪ್ಪು. ಇದು ಟೈಲರ್ ವೃತ್ತಿ ಬಾಂಧವರಲ್ಲಿ ತಾರತಮ್ಯ ಮಾಡಿದಂತಾಗಿದೆ. ಸರಕಾರ ಈ ನಿಯಮವನ್ನು ಕೈಬಿಟ್ಟು ಎಲ್ಲಾ ಟೈಲರ್ ಗಳಿಗೂ ಪ್ಯಾಕೇಜ್ ಮೊತ್ತ ನೀಡುವಂತೆ ಅವರು ಒತ್ತಾಯಿಸಿದರು.
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ (ಕೆಎಸ್ಟಿಎ) ಕಳೆದ 21 ವರ್ಷಗಳಿಂದ ಟೈಲರ್ ವೃತ್ತಿಯವರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಸಂಘವನ್ನು ವಿಶ್ವಾಸಕ್ಕೆ ಪಡೆದು ಸಂಘಟನೆಯ ಗುರುತು ಕಾರ್ಡ್ ತೋರಿಸಿದರೆ ಅಧಿಕಾರಿಗಳು ಮಾನ್ಯತೆ ನೀಡಿ, ಪ್ಯಾಕೇಜ್ ಮೊತ್ತ ಪಡೆಯಲು ಸಹಕರಿಸಬೇಕು. ಈ ಬಗ್ಗೆ ಸರಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಕೆಎಸ್ ಟಿಎ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಮಾತನಾಡಿ, ಸರಕಾರ ಟೈಲರ್ಗಳಿಗೆ ಘೋಷಿಸಿರುವ ಪ್ಯಾಕೇಜ್ ಮೊತ್ತವನ್ನು ಎರಡು ಸಾವಿರದಿಂದ ಐದು ಸಾವಿರಕ್ಕೆ ಏರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಕೆಎಸ್ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ. ವಸಂತ್, ನಗರ ಸಮಿತಿ ಮಾಜಿ ಅಧ್ಯಕ್ಷೆ ಕುಸುಮ ದೇವಾಡಿಗ ಉಪಸ್ಥಿತರಿದ್ದರು.
Mangalore No govt package for tailors association slams govt. We request the govt to consider us as categories of people who are also in distress on account of lockdown.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm