ಬ್ರೇಕಿಂಗ್ ನ್ಯೂಸ್
12-06-21 05:39 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ್ದರೂ, ಕೇಂದ್ರ ಸರಕಾರ ಪೆಟ್ರೋಲ್ ದರದ ನೆಪದಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಇದನ್ನು ವಿರೋಧಿಸಿ ಜೂನ್ 14ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ಮಾಜಿ ಎಂಎಲ್ಸಿ ಐವನ್ ಡಿಸೋಜ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಐವಾನ್ ಡಿಸೋಜ, ಪೆಟ್ರೋಲ್ ದರ ಇತಿಹಾಸದಲ್ಲೇ ಅತ್ಯಂತ ಗರಿಷ್ಠ ಮಟ್ಟಕ್ಕೆ ತಲುಪಿದೆ. ಲೀಟರಿಗೆ 100 ರೂ. ದಾಟಿ ಮುನ್ನಡೆದಿದ್ದರೂ, ಕೇಂದ್ರ ಸರಕಾರ ಸಾಮಾನ್ಯ ಜನರನ್ನು ಮೂರ್ಖರನ್ನಾಗಿಸುವ ಕೆಲಸ ಮಾಡುತ್ತಿದೆ. ದೇಶದ ಅಭಿವೃದ್ಧಿಗಾಗಿ ಸಹಿಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ತೈಲ ಬೆಲೆಯಲ್ಲಿ ನಿರಂತರ ಹೆಚ್ಚಳ ಆಗುತ್ತಿರುವುದು ಸಮಾಜದ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಹಿಂದೆ ಯುಪಿಎ ಸರಕಾರ ಇದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ತೈಲಕ್ಕೆ 140 ಡಾಲರ್ ಆಗಿದ್ದರೂ, ದೇಶದಲ್ಲಿ ಪೆಟ್ರೋಲ್ ಲೀಟರ್ ದರ 70 ರೂಪಾಯಿಗಿಂದ ಮೇಲೆ ಹೋಗಿರಲಿಲ್ಲ. ಆದರೆ, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಕಡಿಮೆ ಇದ್ದರೂ, ಪೆಟ್ರೋಲ್ ದರ ನೂರು ದಾಟಿದೆ. ಬಡವರು, ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದವರು ಮಾತ್ರ ಈ ರೀತಿ ದರ ಹೆಚ್ಚಿಸುತ್ತಾರೆ ಎಂದು ಟೀಕಿಸಿದರು.
ಈಗ ಕೊರೊನಾ ಲಾಕ್ಡೌನ್ ಸಂಕಷ್ಟದಿಂದಾಗಿ ಸಾಮಾನ್ಯ ಜನರು ಹಣ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಸ್ಥಿತಿಯಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ದರವನ್ನು ಏರಿಸುತ್ತಿರುವುದು ಏನನ್ನು ಸೂಚಿಸುತ್ತದೆ. ನಮ್ಮ ಜನರು ಮೂರ್ಖರು ಅಂದ್ಕೊಂಡಿದ್ದಾರೆಯೇ.. ಸರಕಾರದ ಈ ರೀತಿಯ ನಿರ್ಲಜ್ಜ ಧೋರಣೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ವಿರೋಧಿಸಿ ಜೂನ್ 14ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಿಂದ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.
ಪ್ರಧಾನಿ ಮೋದಿಯವರು ಕೊರೊನಾ ಓಡಿಸಲು ಕ್ಯಾಂಡಲ್ ಉರಿಸಲು, ತಪ್ಪಾಳೆ ಹೊಡೆಯಲು ಮತ್ತು ತಟ್ಟೆ ಬಡಿಯಲು ಹೇಳಿದ್ದರು. ನಾವು ಅವರ ಮಾತನ್ನು ಪ್ರತಿಭಟನೆಯಲ್ಲಿ ಯಥಾವತ್ ಪಾಲನೆ ಮಾಡುತ್ತೇವೆ. ತಟ್ಟೆ ಬಡಿದು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ ಎಂದು ಐವಾನ್ ಡಿಸೋಜ ಹೇಳಿದರು. ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಸಾಹುಲ್ ಹಮೀದ್, ಮಹಮ್ಮದ್ ಕುಂಜತ್ ಬೈಲ್, ಅಪ್ಪಿ, ಶುಭೋದಯ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
District Congress led by former MLC Ivan D’Souza will carry out a padayatra from Mallikatte Congress office to Rao & Rao Circle petrol pump on Monday, June 14 protesting against the central government over rising fuel prices.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm