ಬ್ರೇಕಿಂಗ್ ನ್ಯೂಸ್
12-06-21 10:07 pm Mangaluru Correspondent ಕರಾವಳಿ
ಉಡುಪಿ, ಜೂನ್ 12: ದೇಶದಲ್ಲಿ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದೆ. ಕಾಂಗ್ರೆಸ್ ನಾಯಕರು ದೇಶದ್ರೋಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ 370 ವಿಧಿ ಮರಳಿಸುವುದಾಗಿ ಹೇಳಿರುವ ದಿಗ್ವಿಜಯ್ ಸಿಂಗ್ ಒಬ್ಬ ದೇಶದ್ರೋಹಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಶ್ಮೀರದ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ಸೇ ಕಾರಣ. 370ನೇ ವಿಧಿಯ ವಿರುದ್ಧ ಇಡೀ ದೇಶ ಕೂಗಿದರೂ ಕಾಂಗ್ರೆಸಿಗೆ ಕೇಳಲಿಲ್ಲ. ಮೋದಿಯವರ ಸರ್ಕಾರ 370ನೇ ವಿಧಿಯನ್ನು ರದ್ದುಮಾಡಿ ಕಾಶ್ಮೀರ ನಮ್ಮದು ಎಂದಿದೆ. ಈಗ ಕಾಶ್ಮೀರ ಶಾಂತವಾಗಿದೆ, ಜನಜೀವನ ಸಾಮಾನ್ಯವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ 370ನೇ ವಿಧಿ ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಹೇಳಿಕೆಯೋ ಅಥವಾ ದಿಗ್ವಿಜಯಸಿಂಗ್ ವೈಯಕ್ತಿಕ ಹೇಳಿಕೆಯೋ ಎಂದು ಅದರ ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಸಬೇಕು. ವೈಯಕ್ತಿಕ ಹೇಳಿಕೆಯಾದರೆ ತಕ್ಷಣ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ಕೊಡುತ್ತಾ ಬಂದಿದೆ. ಆವತ್ತು ರಾಹುಲ್ ಗಾಂಧಿ ಕೂಡ ಕಾಶ್ಮೀರದ ಬಗ್ಗೆ ಇದೇ ಅಭಿಪ್ರಾಯದಲ್ಲಿ ಟ್ವೀಟ್ ಮಾಡಿದ್ದರು. ಅದೇ ಟ್ವೀಟ್ ನ್ನು ಪಾಕಿಸ್ತಾನ ಕೂಡ ಪ್ರಸ್ತಾಪ ಮಾಡಿತ್ತು. ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎನ್ನುವ ರೀತಿ ರಾಹುಲ್ ಗಾಂಧಿ ತೋರಿಸಿದ್ದರು. ದೆಹಲಿಯ ಕುರ್ಚಿಯನ್ನು ಹಿಡಿಯಲು ದೇಶದ ಯಾವುದೇ ಭಾಗವನ್ನು ಬಿಟ್ಟು ಕೊಡುತ್ತೀರಾ ಕಾಂಗ್ರೆಸಿಗರೇ ? ನಿಮ್ಮದು ರಾಷ್ಟ್ರೀಯ ಕಾಂಗ್ರೆಸ್ ಅಲ್ಲ ದೇಶವಿರೋಧಿ ಕಾಂಗ್ರೆಸ್. ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು. ದಿಗ್ವಿಜಯ್ ಹೇಳಿರುವುದು ಪಕ್ಷದ ನಿಲುವು ಅಲ್ಲ ಅಂತಾದರೆ ಪಕ್ಷದಿಂದ ಉಚ್ಚಾಟಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ನಿಲುವು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶೋಭಾಕರಂದ್ಲಾಜೆ ಆಗ್ರಹಿಸಿದ್ದಾರೆ.
Udupi MP Shobha Karandlaje hits out after Congress leader Digvijaya Singh’s comments in a clubhouse conversation that the revocation of Article 370 and stripping Jammu and Kashmir of statehood was an “extremely sad” decision and his party will have a “relook” at the issue have triggered a row, with the BJP accusing him of speaking against India and in agreement with Pakistan.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm