ಬ್ರೇಕಿಂಗ್ ನ್ಯೂಸ್
12-06-21 10:07 pm Mangaluru Correspondent ಕರಾವಳಿ
ಉಡುಪಿ, ಜೂನ್ 12: ದೇಶದಲ್ಲಿ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದೆ. ಕಾಂಗ್ರೆಸ್ ನಾಯಕರು ದೇಶದ್ರೋಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ 370 ವಿಧಿ ಮರಳಿಸುವುದಾಗಿ ಹೇಳಿರುವ ದಿಗ್ವಿಜಯ್ ಸಿಂಗ್ ಒಬ್ಬ ದೇಶದ್ರೋಹಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಶ್ಮೀರದ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ಸೇ ಕಾರಣ. 370ನೇ ವಿಧಿಯ ವಿರುದ್ಧ ಇಡೀ ದೇಶ ಕೂಗಿದರೂ ಕಾಂಗ್ರೆಸಿಗೆ ಕೇಳಲಿಲ್ಲ. ಮೋದಿಯವರ ಸರ್ಕಾರ 370ನೇ ವಿಧಿಯನ್ನು ರದ್ದುಮಾಡಿ ಕಾಶ್ಮೀರ ನಮ್ಮದು ಎಂದಿದೆ. ಈಗ ಕಾಶ್ಮೀರ ಶಾಂತವಾಗಿದೆ, ಜನಜೀವನ ಸಾಮಾನ್ಯವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ 370ನೇ ವಿಧಿ ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಹೇಳಿಕೆಯೋ ಅಥವಾ ದಿಗ್ವಿಜಯಸಿಂಗ್ ವೈಯಕ್ತಿಕ ಹೇಳಿಕೆಯೋ ಎಂದು ಅದರ ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಸಬೇಕು. ವೈಯಕ್ತಿಕ ಹೇಳಿಕೆಯಾದರೆ ತಕ್ಷಣ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.


ಕಾಂಗ್ರೆಸ್ ಪಕ್ಷ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ಕೊಡುತ್ತಾ ಬಂದಿದೆ. ಆವತ್ತು ರಾಹುಲ್ ಗಾಂಧಿ ಕೂಡ ಕಾಶ್ಮೀರದ ಬಗ್ಗೆ ಇದೇ ಅಭಿಪ್ರಾಯದಲ್ಲಿ ಟ್ವೀಟ್ ಮಾಡಿದ್ದರು. ಅದೇ ಟ್ವೀಟ್ ನ್ನು ಪಾಕಿಸ್ತಾನ ಕೂಡ ಪ್ರಸ್ತಾಪ ಮಾಡಿತ್ತು. ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎನ್ನುವ ರೀತಿ ರಾಹುಲ್ ಗಾಂಧಿ ತೋರಿಸಿದ್ದರು. ದೆಹಲಿಯ ಕುರ್ಚಿಯನ್ನು ಹಿಡಿಯಲು ದೇಶದ ಯಾವುದೇ ಭಾಗವನ್ನು ಬಿಟ್ಟು ಕೊಡುತ್ತೀರಾ ಕಾಂಗ್ರೆಸಿಗರೇ ? ನಿಮ್ಮದು ರಾಷ್ಟ್ರೀಯ ಕಾಂಗ್ರೆಸ್ ಅಲ್ಲ ದೇಶವಿರೋಧಿ ಕಾಂಗ್ರೆಸ್. ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು. ದಿಗ್ವಿಜಯ್ ಹೇಳಿರುವುದು ಪಕ್ಷದ ನಿಲುವು ಅಲ್ಲ ಅಂತಾದರೆ ಪಕ್ಷದಿಂದ ಉಚ್ಚಾಟಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ನಿಲುವು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶೋಭಾಕರಂದ್ಲಾಜೆ ಆಗ್ರಹಿಸಿದ್ದಾರೆ.
Udupi MP Shobha Karandlaje hits out after Congress leader Digvijaya Singh’s comments in a clubhouse conversation that the revocation of Article 370 and stripping Jammu and Kashmir of statehood was an “extremely sad” decision and his party will have a “relook” at the issue have triggered a row, with the BJP accusing him of speaking against India and in agreement with Pakistan.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am