ಬ್ರೇಕಿಂಗ್ ನ್ಯೂಸ್
14-06-21 11:49 am Mangalore Correspondent ಕರಾವಳಿ
ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 17 ಗ್ರಾಮ ಪಂಚಾಯತ್ ಗಳನ್ನು ಜೂನ್ 14 ರಿಂದ ಜೂನ್ 21ರ ವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗದ ಕಾರಣ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಪಾಸಿಟಿವ್ ದರ ಕಡಿಮೆ ಮಾಡುವ ಉದ್ದೇಶದಿಂದ 50ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸೀಲ್ಡೌನ್ ಮಾಡಲು ನಿರ್ಧರಿಸಲಾಗಿತ್ತು. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಿರುವ ಗ್ರಾಮ ಪಂಚಾಯತಿಗಳ ಬಗ್ಗೆ ಟಾಸ್ಕ್ಫೋರ್ಸ್ ನೀಡಿರುವ ವರದಿ ಆಧರಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಇಂದಿನಿಂದ ಜೂನ್ 21ರ ಬೆಳಗ್ಗೆ 9 ಗಂಟೆ ವರೆಗೆ ಏಳು ದಿನಗಳ ಕಾಲ 17 ಗ್ರಾಪಂಗಳಲ್ಲಿ ಸೀಲ್ಡೌನ್ ಇರಲಿದೆ. ಈ ವೇಳೆ ಗ್ರಾಮಗಳಿಗೆ ಹೊರಗಿನ ಯಾರು ಕೂಡ ಬರುವಂತಿಲ್ಲ. ಜೊತೆಗೆ ಗ್ರಾಮದಿಂದ ಹೊರ ಹೊಗುವುದನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಕೆಎಂಎಫ್ ಹಾಲಿನ ಬೂತ್, ಪೆಟ್ರೋಲ್ ಬಂಕ್ ತೆರೆಯಲು ಮತ್ತು ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ.
ಮಂಗಳೂರು ತಾಲೂಕಿನ ನೀರುಮಾರ್ಗ ಮತ್ತು ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೆಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯ್ಲ, ಉಜಿರೆ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಸವಣೂರು ಗ್ರಾಮ ಪಂಚಾಯತಿಗಳು ಜಿಲ್ಲಾಧಿಕಾರಿ ಆದೇಶದಂತೆ ಸೀಲ್ ಡೌನ್ ಆಗಲಿದೆ.
Complete seal down will be enforced in 17-gram panchayats of Dakshina Kannada district from June 14 to 21. The gram panchayats where there are more than 50 active Covid-19 cases will go for complete seal down.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm