ಬ್ರೇಕಿಂಗ್ ನ್ಯೂಸ್
14-06-21 11:49 am Mangalore Correspondent ಕರಾವಳಿ
ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 17 ಗ್ರಾಮ ಪಂಚಾಯತ್ ಗಳನ್ನು ಜೂನ್ 14 ರಿಂದ ಜೂನ್ 21ರ ವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗದ ಕಾರಣ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಪಾಸಿಟಿವ್ ದರ ಕಡಿಮೆ ಮಾಡುವ ಉದ್ದೇಶದಿಂದ 50ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸೀಲ್ಡೌನ್ ಮಾಡಲು ನಿರ್ಧರಿಸಲಾಗಿತ್ತು. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಿರುವ ಗ್ರಾಮ ಪಂಚಾಯತಿಗಳ ಬಗ್ಗೆ ಟಾಸ್ಕ್ಫೋರ್ಸ್ ನೀಡಿರುವ ವರದಿ ಆಧರಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಜೂನ್ 21ರ ಬೆಳಗ್ಗೆ 9 ಗಂಟೆ ವರೆಗೆ ಏಳು ದಿನಗಳ ಕಾಲ 17 ಗ್ರಾಪಂಗಳಲ್ಲಿ ಸೀಲ್ಡೌನ್ ಇರಲಿದೆ. ಈ ವೇಳೆ ಗ್ರಾಮಗಳಿಗೆ ಹೊರಗಿನ ಯಾರು ಕೂಡ ಬರುವಂತಿಲ್ಲ. ಜೊತೆಗೆ ಗ್ರಾಮದಿಂದ ಹೊರ ಹೊಗುವುದನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಕೆಎಂಎಫ್ ಹಾಲಿನ ಬೂತ್, ಪೆಟ್ರೋಲ್ ಬಂಕ್ ತೆರೆಯಲು ಮತ್ತು ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ.

ಮಂಗಳೂರು ತಾಲೂಕಿನ ನೀರುಮಾರ್ಗ ಮತ್ತು ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೆಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯ್ಲ, ಉಜಿರೆ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಸವಣೂರು ಗ್ರಾಮ ಪಂಚಾಯತಿಗಳು ಜಿಲ್ಲಾಧಿಕಾರಿ ಆದೇಶದಂತೆ ಸೀಲ್ ಡೌನ್ ಆಗಲಿದೆ.
Complete seal down will be enforced in 17-gram panchayats of Dakshina Kannada district from June 14 to 21. The gram panchayats where there are more than 50 active Covid-19 cases will go for complete seal down.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm