ಬ್ರೇಕಿಂಗ್ ನ್ಯೂಸ್
14-06-21 11:49 am Mangalore Correspondent ಕರಾವಳಿ
ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 17 ಗ್ರಾಮ ಪಂಚಾಯತ್ ಗಳನ್ನು ಜೂನ್ 14 ರಿಂದ ಜೂನ್ 21ರ ವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗದ ಕಾರಣ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಪಾಸಿಟಿವ್ ದರ ಕಡಿಮೆ ಮಾಡುವ ಉದ್ದೇಶದಿಂದ 50ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸೀಲ್ಡೌನ್ ಮಾಡಲು ನಿರ್ಧರಿಸಲಾಗಿತ್ತು. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಿರುವ ಗ್ರಾಮ ಪಂಚಾಯತಿಗಳ ಬಗ್ಗೆ ಟಾಸ್ಕ್ಫೋರ್ಸ್ ನೀಡಿರುವ ವರದಿ ಆಧರಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಜೂನ್ 21ರ ಬೆಳಗ್ಗೆ 9 ಗಂಟೆ ವರೆಗೆ ಏಳು ದಿನಗಳ ಕಾಲ 17 ಗ್ರಾಪಂಗಳಲ್ಲಿ ಸೀಲ್ಡೌನ್ ಇರಲಿದೆ. ಈ ವೇಳೆ ಗ್ರಾಮಗಳಿಗೆ ಹೊರಗಿನ ಯಾರು ಕೂಡ ಬರುವಂತಿಲ್ಲ. ಜೊತೆಗೆ ಗ್ರಾಮದಿಂದ ಹೊರ ಹೊಗುವುದನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಕೆಎಂಎಫ್ ಹಾಲಿನ ಬೂತ್, ಪೆಟ್ರೋಲ್ ಬಂಕ್ ತೆರೆಯಲು ಮತ್ತು ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ.

ಮಂಗಳೂರು ತಾಲೂಕಿನ ನೀರುಮಾರ್ಗ ಮತ್ತು ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೆಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯ್ಲ, ಉಜಿರೆ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಸವಣೂರು ಗ್ರಾಮ ಪಂಚಾಯತಿಗಳು ಜಿಲ್ಲಾಧಿಕಾರಿ ಆದೇಶದಂತೆ ಸೀಲ್ ಡೌನ್ ಆಗಲಿದೆ.
Complete seal down will be enforced in 17-gram panchayats of Dakshina Kannada district from June 14 to 21. The gram panchayats where there are more than 50 active Covid-19 cases will go for complete seal down.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm