ಕರಾವಳಿಯಲ್ಲಿ ಮುಂಗಾರು ಅಬ್ಬರ ; ಇನ್ನೂ ಎರಡು ದಿನ ಮಳೆ ಸೂಚನೆ

14-06-21 04:54 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ಭಾರೀ ಮಳೆ ಸುರಿದಿದೆ. ಜೂನ್ 14 ಮತ್ತು 15 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಆರೆಂಜ್ ಅಲರ್ಟ್ ಘೋಷಣೆಯನ್ನು ಹವಾಮಾನ‌ ಇಲಾಖೆ‌ ಮಾಡಿದೆ. 

Photo credits : Dinesh Holla, Fb

ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ಭಾರೀ ಮಳೆ ಸುರಿದಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡಬಿದಿರೆ, ಸುಳ್ಯ, ಪುತ್ತೂರು, ಕಡಬ ಭಾಗದಲ್ಲೂ ಎಡೆಬಿಡದೆ ಮಳೆಯಾಗುತ್ತಿದೆ. ಕಾಸರಗೋಡು ಮತ್ತು ಉಡುಪಿ ಜಿಲ್ಲೆಯಲ್ಲೂ ಒಂದೇ ಸಮನೆ ಮಳೆ ಬೀಳುತ್ತಿದೆ. ಜೂನ್ 14 ಮತ್ತು 15 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಆರೆಂಜ್ ಅಲರ್ಟ್ ಘೋಷಣೆಯನ್ನು ಹವಾಮಾನ‌ ಇಲಾಖೆ‌ ಮಾಡಿದೆ. 

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಂಗಳೂರು ನಗರದ ಕೆ.ಎಸ್ ರಾವ್ ರೋಡ್, ಗುಜ್ಜರಕೆರೆ, ಲಾಲ್ ಭಾಗ್, ಅಂಬೇಡ್ಕರ್ ವೃತ್ತ ಸೇರಿದಂತೆ ಹಲವೆಡೆ ಡ್ರೈನೇಜ್ ನೀರು, ಮಳೆನೀರು ಜೊತೆ ರಸ್ತೆಯಲ್ಲೇ ಚರಂಡಿ ನೀರು ಹರಿದಿದ್ದು, ರಸ್ತೆಗಳು ಜಲಾವೃತವಾಗಿದೆ.

ಜೂನ್ 17ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ನಾಡದೋಣಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Heavy rains lashes in Dakshina Kannada two days high alert declared