ಬ್ರೇಕಿಂಗ್ ನ್ಯೂಸ್
15-06-21 07:13 am Mangaluru Correspondent ಕರಾವಳಿ
ಮಂಗಳೂರು, ಜೂನ್ 15: ನಗರ ಹೊರವಲಯದ ಕಾವೂರು ಬಳಿಯ ಮರವೂರು ಸೇತುವೆ ಬಿರುಕು ಬಿಟ್ಟಿದೆ. ನಿರಂತರ ಮತ್ತು ಅವೈಜ್ಞಾನಿಕ ರೀತಿಯ ಮರಳುಗಾರಿಕೆಯಿಂದಾಗಿ ಮತ್ತೊಂದು ಸೇತುವೆ ಬಲಿಯಾಗಿದೆ.
ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದಾರೆ. ನಿನ್ನೆ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದಾರೆ. ಇದರಿಂದಾಗಿ ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.


ಬಜ್ಪೆ ಏರ್ಪೋರ್ಟ್ ತೆರಳುವ ವಾಹನಗಳನ್ನು ಕಾವೂರು ಮೂಲಕ ಡೈವರ್ಟ್ ಮಾಡಲಾಗುತ್ತಿದೆ. ಕಾವೂರು ಕಡೆಯಿಂದ ಕಟೀಲು, ಬಜ್ಪೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಪೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ನಗರದಿಂದ ಕೇವಲ ಹತ್ತು ನಿಮಿಷದಲ್ಲಿ ಏರ್ಪೋರ್ಟ್ ತಲುಪುತ್ತಿದ್ದ ಸಾವಿರಾರು ವಾಹನಗಳ ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿದೆ.
ಅಕ್ರಮ ಮರಳುಗಾರಿಕೆಗೆ ಬಲಿ
ಮರವೂರು ಸೇತುವೆಯ ಪಕ್ಕದಲ್ಲಿ ನಿರಂತರವಾಗಿ ಮರಳುಗಾರಿಕೆ ನಡೆಸಲಾಗುತ್ತಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ ಡ್ಯಾಮ್ ಮತ್ತು ಸೇತುವೆಯ ಮಧ್ಯೆ ಡ್ರೆಜ್ಜರ್ ಇಟ್ಟು ಮರಳು ತೆಗೆಯುವ ಕಾರ್ಯ ನಡೆಯುತ್ತಿತ್ತು. ಸೇತುವೆಯ ಇಕ್ಕೆಲಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಸಿದ್ದು ಈಗ ಸೇತುವೆಯನ್ನೇ ಬಲಿಕೊಟ್ಟಿದೆ. ತುಂಬ ಗಟ್ಟಿಮುಟ್ಟಾಗಿದ್ದ ಸೇತುವೆಯ ಒಂದು ಪಾರ್ಶ್ವದಲ್ಲಿ ಬಿರುಕು ಕಾಣಿಸಿಕೊಂಡಿದ್ದು ತುಂಡಾಗಿ ಬೀಳಬಹುದೆಂಬ ಆತಂಕ ಎದುರಾಗಿದೆ. ಮರವೂರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವುದು ಕಾವೂರು ಪೊಲೀಸರಿಗೂ ಗೊತ್ತಿತ್ತು. ಆದರೆ, ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸಿನ ಪ್ರಭಾವಿಗಳೇ ಶಾಮೀಲಾಗಿದ್ದರಿಂದ ಯಾವುದೇ ಕ್ರಮ ಆಗಿರಲಿಲ್ಲ. ಎರಡು ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಮುಲ್ಲರಪಟ್ಣ ಸೇತುವೆಯೂ ಮರಳುಗಾರಿಕೆಯ ಕಾರಣದಿಂದಾಗಿಯೇ ಕುಸಿದು ಬಿದ್ದಿತ್ತು.

ನದಿಗೆ ಸೇತುವೆ ಇರುವ 500 ಮೀಟರ್ ಅಂತರದಲ್ಲಿ ಮರಳು ತೆಗೆಯುವಂತಿಲ್ಲ ಎಂಬ ನಿಯಮ ಇದೆ. ಆದರೆ, ಮರವೂರು ಸೇತುವೆಯ ಬಳಿ ಈ ನಿಯಮಗಳನ್ನೇ ಗಾಳಿಗೆ ತೂರಲಾಗಿತ್ತು. ಈಗ ಮಳೆಗಾಲದ ಆರಂಭದಲ್ಲೇ ಸೇತುವೆಯಲ್ಲಿ ಬಿರುಕು ಕಾಣಿಸಿದ್ದು ಈ ಬಾರಿ ಲಾಕ್ಡೌನ್ ಮಧ್ಯೆಯೂ ಮೆಷಿನ್ ಮೂಲಕ ಮರಳು ಎತ್ತಿದ್ದರ ಪರಿಣಾಮ ಎನ್ನುವುದನ್ನು ಸ್ಥಳೀಯರೇ ಹೇಳುತ್ತಾರೆ. ಜಿಲ್ಲಾಧಿಕಾರಿಗಳೇ, ಬಿರುಕು ಬಿದ್ದ ಸೇತುವೆಯನ್ನು ದುರಸ್ತಿ ಪಡಿಸುವ ಕೆಲಸವನ್ನು ಸ್ಥಳೀಯ ಮರಳು ಕುಳಗಳಿಂದಲೇ ಮಾಡಿಸ್ತೀರಾ..?
Video:
Major Crack found in Maravoor Bridge in Mangalore. Airport Road has been closed and diverted. Illegal Sand Mining is the reason for the crack in the bridge.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm