ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am