ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.
ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm