ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm