ಬ್ರೇಕಿಂಗ್ ನ್ಯೂಸ್
15-06-21 09:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 15: ಮರವೂರು ಸೇತುವೆ ಕುಸಿಯುವುದಕ್ಕೆ ನಿರಂತರ ಮರಳುಗಾರಿಕೆ ಮತ್ತು ಈ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದ್ದೇ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ದೂರಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅಭಯಚಂದ್ರ ಜೈನ್, ಮರವೂರು ಸೇತುವೆ ಮಂಗಳೂರು ನಗರವನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ. ಆದರೆ, ಈ ಸೇತುವೆಯ ಇಕ್ಕೆಲಗಳಲ್ಲಿ ಫಲ್ಗುಣಿ ನದಿಯಿಂದ ಮರಳನ್ನು ಎತ್ತಿರುವುದು ಈಗ ದುರಂತಕ್ಕೆ ಕಾರಣವಾಗಿದೆ. ಡ್ರೆಜಿಂಗ್ ನೆಪದಲ್ಲಿ ಸೇತುವೆ ಪಕ್ಕದಲ್ಲಿ ಮರಳು ತೆಗೆದಿದ್ದರಿಂದ ಪಿಲ್ಲರ್ ಕುಸಿದು ನಿಂತಿದೆ. ಈ ಭಾಗದಲ್ಲಿ ಮರಳುಗಾರಿಕೆ ಆಗುತ್ತಿರುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಮೌನ ವಹಿಸಿದ್ದೇ ದುರಂತಕ್ಕೆ ಕಾರಣ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ನಿರ್ಲಕ್ಷ್ಯ ವಹಿಸಿದ್ದರಿಂದ ಸೇತುವೆ ಕುಸಿಯುವಂತಾಗಿದೆ.



ಮರವೂರು ಅಣೆಕಟ್ಟಿನಲ್ಲಿಯೂ ಮರಳುಗಾರಿಕೆ ನಡೆಯುತ್ತಿದ್ದು ಡ್ಯಾಮಿಗೂ ಆಪತ್ತು ಎದುರಾಗಿದೆ. ರೈಲ್ವೇ ಸೇತುವೆ ಬಳಿಯಲ್ಲೂ ಮರಳುಗಾರಿಕೆ ನಡೆಯುತ್ತಿದ್ದು ಅದಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ. ಇವೆಲ್ಲ ನಮ್ಮ ಅಧಿಕಾರಿಗಳ ಮೂಗಿನ ನೇರಕ್ಕೆ ನಡೆಯುತ್ತಿದ್ದು, ವ್ಯವಸ್ಥೆಯ ಲೋಪಕ್ಕೆ ಸಾಕ್ಷಿ. ಈಗ ಮರವೂರು ಸೇತುವೆ ಕುಸಿದಿದ್ದರಿಂದ ಮಂಗಳೂರು ನಗರದಿಂದ ಬಜ್ಪೆಗೆ ಸಂಪರ್ಕ ಕಡಿತವಾಗಿದೆ. ಹಿಂದೆ 20 ನಿಮಿಷದಲ್ಲಿ ವಿಮಾನ ನಿಲ್ದಾಣ ತಲುಪಲಾಗುತ್ತಿದ್ದರೆ, ಇನ್ನು ಒಂದು ಗಂಟೆ ಬೇಕಾಗುತ್ತದೆ ಎಂದು ಟೀಕಿಸಿದರು.
ಇದೇ ವೇಳೆ, ಮಾತನಾಡಿದ ಯೂತ್ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಸೇತುವೆ ಕುಸಿದು ಬಿದ್ದಿರುವ ಘಟನೆಯ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಆಗಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಯೇ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ವಿನಯರಾಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Also Read: ಮರವೂರು ಸೇತುವೆ ಕುಸಿಯಲು ಏನು ಕಾರಣ ? ಹೊಸತರ ಧಾವಂತಕ್ಕೆ ಬಲಿಬಿತ್ತೇ ಹಳೆಯ ಪಿಲ್ಲರ್ ?
Former MLA Abhayachandra Jain alleged that the sand mafia and negligence of the district administration have caused damage to the Maravoor bridge. Addressing media here on Wednesday, June 15, Jain said, "The bridge that connects the city to the Mangaluru International Airport has been damaged due to the negligence of district administration and sand mafia.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm