ಬ್ರೇಕಿಂಗ್ ನ್ಯೂಸ್
17-06-21 01:36 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂ.17: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ವಿರುದ್ಧ ಮೂರು ತಿಂಗಳ ಜೈಲು ಶಿಕ್ಷೆ ಆದೇಶವನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟ ಮೂಲ ದಾವೆ ನಂಬರ್ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಮತ್ತು ಇತರರ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರು ಹಾಗೂ ಸಂಸ್ಥೆಗಳ ಗೌರವಕ್ಕೆ ಹಾನಿಯಾಗುವ ಹೇಳಿಕೆ ಅಥವಾ ಆರೋಪ ಮಾಡದಂತೆ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿತ್ತು. ಈ ಆದೇಶ ಪದೇ ಪದೆ ಉಲ್ಲಂಘನೆಯಾಗುತ್ತಿದ್ದ ಕಾರಣ ಮತ್ತೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್ ಹಿಂದೆ ಎರಡು ಬಾರಿ ಸೋಮನಾಥ ನಾಯಕ್ಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದರ ವಿರುದ್ಧ ಸೋಮನಾಥ ನಾಯಕ್ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಪ್ರಕರಣದ ಹೆಚ್ಚುವರಿ ತನಿಖೆಗೆ ಮೂಲ ಕೋರ್ಟ್ಗೆ ಅರ್ಜಿ ರವಾನಿಸಲ್ಪಟ್ಟಿತ್ತು.

ಈ ಸಂಬಂಧ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಜೂ.8ರಂದು ಅಂತಿಮ ಆದೇಶ ಹೊರಡಿಸಿ, ಹಿಂದಿನ ತೀರ್ಪನ್ನೇ ಪುನರುಚ್ಚರಿಸಿದ್ದಾರೆ. ಮೂರು ತಿಂಗಳ ಜೈಲು ಶಿಕ್ಷೆ ಅಲ್ಲದೆ ಸೋಮನಾಥ ನಾಯಕ್ ಗೆ ಸೇರಿದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿ ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರು. ಪರಿಹಾರ ನೀಡಬೇಕು. ಪ್ರಕರಣದಲ್ಲಿ ಕೋರ್ಟ್ ಅವಧಿ ದುರುಪಯೋಗಪಡಿಸಿ ಮತ್ತೆ ಶ್ರೀ ಕ್ಷೇತ್ರಕ್ಕೆ ಉಪಟಳ ನೀಡಿದ್ದಕ್ಕೆ ಹೆಚ್ಚುವರಿ ಪರಿಹಾರವಾಗಿ 2,000 ರು. ನೀಡುವಂತೆಯೂ ಆದೇಶಿಸಿದೆ ಎಂದು ಎ.ವಿ. ಶೆಟ್ಟಿ ಧರ್ಮಸ್ಥಳದ ಪರವಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Belthanagady Nagarika Trust President Somanath sentenced to months in jail for damaging Dharmasthala Hedges's family name.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm