ಬ್ರೇಕಿಂಗ್ ನ್ಯೂಸ್
17-06-21 01:36 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂ.17: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ವಿರುದ್ಧ ಮೂರು ತಿಂಗಳ ಜೈಲು ಶಿಕ್ಷೆ ಆದೇಶವನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟ ಮೂಲ ದಾವೆ ನಂಬರ್ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಮತ್ತು ಇತರರ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರು ಹಾಗೂ ಸಂಸ್ಥೆಗಳ ಗೌರವಕ್ಕೆ ಹಾನಿಯಾಗುವ ಹೇಳಿಕೆ ಅಥವಾ ಆರೋಪ ಮಾಡದಂತೆ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿತ್ತು. ಈ ಆದೇಶ ಪದೇ ಪದೆ ಉಲ್ಲಂಘನೆಯಾಗುತ್ತಿದ್ದ ಕಾರಣ ಮತ್ತೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್ ಹಿಂದೆ ಎರಡು ಬಾರಿ ಸೋಮನಾಥ ನಾಯಕ್ಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದರ ವಿರುದ್ಧ ಸೋಮನಾಥ ನಾಯಕ್ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಪ್ರಕರಣದ ಹೆಚ್ಚುವರಿ ತನಿಖೆಗೆ ಮೂಲ ಕೋರ್ಟ್ಗೆ ಅರ್ಜಿ ರವಾನಿಸಲ್ಪಟ್ಟಿತ್ತು.

ಈ ಸಂಬಂಧ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಜೂ.8ರಂದು ಅಂತಿಮ ಆದೇಶ ಹೊರಡಿಸಿ, ಹಿಂದಿನ ತೀರ್ಪನ್ನೇ ಪುನರುಚ್ಚರಿಸಿದ್ದಾರೆ. ಮೂರು ತಿಂಗಳ ಜೈಲು ಶಿಕ್ಷೆ ಅಲ್ಲದೆ ಸೋಮನಾಥ ನಾಯಕ್ ಗೆ ಸೇರಿದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿ ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರು. ಪರಿಹಾರ ನೀಡಬೇಕು. ಪ್ರಕರಣದಲ್ಲಿ ಕೋರ್ಟ್ ಅವಧಿ ದುರುಪಯೋಗಪಡಿಸಿ ಮತ್ತೆ ಶ್ರೀ ಕ್ಷೇತ್ರಕ್ಕೆ ಉಪಟಳ ನೀಡಿದ್ದಕ್ಕೆ ಹೆಚ್ಚುವರಿ ಪರಿಹಾರವಾಗಿ 2,000 ರು. ನೀಡುವಂತೆಯೂ ಆದೇಶಿಸಿದೆ ಎಂದು ಎ.ವಿ. ಶೆಟ್ಟಿ ಧರ್ಮಸ್ಥಳದ ಪರವಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Belthanagady Nagarika Trust President Somanath sentenced to months in jail for damaging Dharmasthala Hedges's family name.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm