ಬ್ರೇಕಿಂಗ್ ನ್ಯೂಸ್
17-06-21 11:15 pm Mangaluru Correspondent ಕರಾವಳಿ
ಮಂಗಳೂರು, ಜೂನ್ 17: ಶಾಸಕರು ಶಾಸಕಾಂಗ ಸಭೆ ಕರೆಯಿರಿ ಎಂದರೆ ಕೊರೊನಾ ನಿಯಮ ಎಂದು ನಿರಾಕರಿಸುತ್ತಾರೆ. ಆದರೆ ಈಗ ಅಧಿಕಾರಕ್ಕಾಗಿ ಸಭೆ ಸೇರಿ ಕಚ್ಚಾಟ ನಡೆಸುತ್ತಾರೆ. ಹೀಗೆ ಸಭೆ ಸೇರಿದರೆ ಕೋವಿಡ್ ನಿಯಮ ಅನ್ವಯ ಆಗಲ್ವಾ ಎಂದು ಮಾಜಿ ಸಚಿವ ಯು.ಟಿ. ಖಾದರ್ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯು.ಟಿ. ಖಾದರ್, ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ರಾಜ್ಯದ ಜನರಿಗೆ ದ್ರೋಹವಾಗುತ್ತಿದೆ. ಜನರಿಗೆ ದ್ರೋಹ ಎಸಗುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಜನರು ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆಯಿಲ್ಲ. ಕೋವಿಡ್ ನಿಯಂತ್ರಣಕ್ಕೆ ಸಭೆ ಕರೆದಿಲ್ಲ. ಶಾಸಕರು ಸಭೆ ಕರೆಯಿರಿ ಎಂದು ಹೇಳಿದರೆ ಕೊರೊನಾ ನಿಯಮ ಎಂದು ಹೇಳುತ್ತಾರೆ. ಆದರೆ ಈಗ ಅಧಿಕಾರ ಕಚ್ಚಾಟಕ್ಕೆ ಸಭೆ ಸೇರಿದರೆ ನಿಯಮ ಅನ್ವಯ ಆಗಲ್ವೇ ಎಂದು ಪ್ರಶ್ನೆ ಮಾಡಿದರು.
ಬಿಜೆಪಿ ನಡವಳಿಕೆಯಿಂದ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದ ಗೌರವ, ಘನತೆಗೆ ಧಕ್ಕೆ ಒದಗಿದೆ. ಸರ್ಕಾರ ರಾಜಕೀಯ ಜಂಜಾಟವನ್ನು ಒಂದು ತಿಂಗಳು ಮುಂದೆ ಹಾಕಲಿ. ಈಗಲಾದರೂ ಜನರ ಕಷ್ಟದ ಬಗ್ಗೆ ಗಮನಹರಿಸಲಿ ಎಂದು ಯು. ಟಿ. ಖಾದರ್ ವಾಗ್ದಾಳಿ ನಡೆಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್, ಡಿಸೇಲ್ನಲ್ಲಿ ಶತಕ ಬಾರಿಸುವ ಮೂಲಕ ಸಾಧನೆಯನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಟೀಕಿಸಿದರು.
ಪೆಟ್ರೋಲ್ ದರ ಏರಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆಯೇರಿಕೆ ಕಾರಣ ಅಂತಾ ಹೇಳುತ್ತಾರೆ. ಆದರೆ ಚುನಾವಣೆ ಬರುವಾಗ ಬೆಲೆ ಕಡಿಮೆಯಾಗುತ್ತದೆ ಎಂದು ಖಾದರ್ ಆರೋಪಿಸಿದರು.
Former MLA U T Khader referring to the rise in prices stated that the petrol stations have become tax-collecting booths for the central government after petrol price touched the Rs 100 mark.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 06:11 pm
Mangalore Correspondent
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm