ಬ್ರೇಕಿಂಗ್ ನ್ಯೂಸ್
20-06-21 07:40 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ರಾಜ್ಯ ಸರಕಾರ ಅನ್ ಲಾಕ್ ಬಗ್ಗೆ ಮಾರ್ಗಸೂಚಿ ಹೊರಡಿಸಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದನ್ನು ಸ್ವಲ್ಪಮಟ್ಟಿಗೆ ಮಾರ್ಪಡಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಹೊಸ ಮಾರ್ಗದರ್ಶಿ ಪ್ರಕಾರ, ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ಮಾತ್ರ ಅಗತ್ಯ ಸಾಮಗ್ರಿಗಳ ಅಂಗಡಿಗಳನ್ನು ತೆರೆದಿಡಲು ಅವಕಾಶ ನೀಡಲಾಗಿದೆ.
ಜೊತೆಗೆ, ವಾರಾಂತ್ಯದಲ್ಲಿ ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಏಳು ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಸಾಮಗ್ರಿ ಅಂಗಡಿ ತೆರೆದಿಡಬಹುದೇ ಎನ್ನುವ ಬಗ್ಗೆ ಜಿಲ್ಲಾಧಿಕಾರಿ ಮಾರ್ಗಸೂಚಿಯಲ್ಲಿ ಮಾಹಿತಿ ಇಲ್ಲ. ವೀಕೆಂಡ್ ಕರ್ಫ್ಯೂ ಪ್ರಕಾರ, ಈ ಅವಧಿಯಲ್ಲಿ ಎರಡು ದಿನ ಪೂರ್ತಿ ಬಂದ್ ಇರುತ್ತದೆ. ಇದಲ್ಲದೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಸಂಜೆ 7ರಿಂದ ಬೆಳಗ್ಗೆ 7ರ ವರೆಗೆ ನೈಟ್ ಕರ್ಫ್ಯೂವನ್ನು ಹೊಸತಾಗಿ ಹೇರಲಾಗಿದೆ.

ಇತರೇ ದಿನಗಳಲ್ಲಿ ತರಕಾರಿ, ದಿನಸಿ ಅಂಗಡಿಗಳು, ಮೀನು, ಮಾಂಸದ ಮಾರುಕಟ್ಟೆ, ಹಾಲಿನ ಡೈರಿಗಳು ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ಇರಲಿದೆ. ಅಲ್ಲದೆ, ಆಹಾರ ಉತ್ಪನ್ನಗಳ ತಯಾರಿಕಾ ಫ್ಯಾಕ್ಟರಿಗಳು, ಕೈಗಾರಿಕೆಗಳು 50 ಶೇ. ಸಿಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಇದರ ಜೊತೆಗೆ, ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರ ಅಂಗಡಿಗಳು, ಸ್ವತಂತ್ರ ಮದ್ಯದಂಗಡಿಗಳು, ಮದ್ಯದ ಮಳಿಗೆಗಳು ಬೆಳಗ್ಗೆ ಏಳರಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ತೆರೆದಿಡಬಹುದು. ಮದ್ಯ ಪಾರ್ಸೆಲ್ ಒಯ್ಯುವುದಕ್ಕೆ ಮಾತ್ರ ಅವಕಾಶ ಇರುತ್ತದೆ. ಸಿಮೆಂಟ್, ಸ್ಟೀಲ್ ಸೇರಿದಂತೆ ಕಟ್ಟಡ ನಿರ್ಮಾಣ ಸಂಬಂಧಿತ ಸಾಮಗ್ರಿಗಳ ಅಂಗಡಿಗಳು, ದುರಸ್ತಿ ಕಾರ್ಯ ನಿರ್ವಹಿಸುವ ಗ್ಯಾರೇಜ್ ಮತ್ತಿತರ ಶಾಪ್ ಗಳು, ಕನ್ನಡಕದ ಅಂಗಡಿಗಳನ್ನು ಮಧ್ಯಾಹ್ನ ವರೆಗೆ ತೆರೆದಿಡ ಬಹುದಾಗಿದೆ.
ಆಟೋ, ಟ್ಯಾಕ್ಸಿ ವಾಹನಗಳಿಗೆ ಇಬ್ಬರು ಪ್ರಯಾಣಿಕರನ್ನು ಕುಳ್ಳಿರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಯಾವುದೇ ರೀತಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿಲ್ಲ. ಹೊರ ಜಿಲ್ಲೆಗಳಿಂದ ಕೆಎಸ್ಸಾರ್ಟಿಸಿ ಮತ್ತಿತರ ಬಸ್ ಗಳ ಆಗಮನಕ್ಕೂ ಅವಕಾಶ ನೀಡಲಾಗಿಲ್ಲ. ಅಲ್ಲದೆ, ದ.ಕ. ಜಿಲ್ಲೆಯಲ್ಲಿ ಪಾರ್ಕ್ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಮಾರ್ಗಸೂಚಿ ಆದೇಶ ಜುಲೈ 5ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mangalore district administration on Sunday June 20 announced that beginning Monday June 21, shops selling essential items will remain open from 7 am to 1 pm.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am