ದೇವಸ್ಥಾನದಲ್ಲಿ ನಾಲ್ಕು ಮದುವೆ ; ಅವಕಾಶ ಕೊಟ್ಟಿದ್ದ ಅಧಿಕಾರಿಗಳ ವಿರುದ್ಧವೇ ಎಫ್ಐಆರ್, ಕುಟುಂಬಗಳ ವಿರುದ್ಧವೂ ಕೇಸು !

20-06-21 08:04 pm       Mangaluru Correspondent   ಕರಾವಳಿ

ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಮದುವೆಗಳನ್ನು ನಡೆಸಿರುವುದಕ್ಕೆ ಸಂಬಂಧಿಸಿ ಪೊಲೀಸರು ಅವಕಾಶ ನೀಡಿದ್ದ ಅಧಿಕಾರಿಗಳ ಸಹಿತ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.

ಮಂಗಳೂರು, ಜೂನ್ 20: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಮದುವೆಗಳನ್ನು ನಡೆಸಿರುವುದಕ್ಕೆ ಸಂಬಂಧಿಸಿ ಪೊಲೀಸರು ಅವಕಾಶ ನೀಡಿದ್ದ ಅಧಿಕಾರಿಗಳ ಸಹಿತ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.

ಬಿಜೆಪಿ ಮುಖಂಡ, ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಭಾಸ್ಕರಚಂದ್ರ ಶೆಟ್ಟಿಯ ಪುತ್ರಿಯ ಮದುವೆ ಜೊತೆಗೆ ಬೇರೆ ನಾಲ್ಕು ಜೋಡಿಯ ಮದುವೆಯನ್ನು ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಇಂದು ಏರ್ಪಡಿಸಲಾಗಿತ್ತು. ಈ ಬಗ್ಗೆ ವಿಷಯ ತಿಳಿದು ಮುಜರಾಯಿ ಇಲಾಖೆ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದರು.

ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿತ್ತು. ಆನಂತರ ಸಂಪ್ರದಾಯಕ್ಕೆ ತಕ್ಕಂತೆ ಮದುವೆ ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ನಾಲ್ಕು ಮದುವೆ ಜೋಡಿಗಳು, ಒಂದೇ ಜಾಗದಲ್ಲಿ ನಾಲ್ಕು ಮದುವೆಗೆ ಅವಕಾಶ ನೀಡಿದ್ದ ಮಹಾನಗರ ಪಾಲಿಕೆ ಆರೋಗ್ಯಧಿಕಾರಿಗಳು ಮತ್ತು ಮದುವೆಗೆ ಅವಕಾಶ ಕೊಟ್ಟಿದ್ದ ದೇವಸ್ಥಾನದ ಆಡಳಿತ ಕಮಿಟಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 

Read: ಲಾಕ್ಡೌನ್ ನೀತಿ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ ; ಅಧಿಕಾರಿಗಳ ದಾಳಿ

Mass Grand Wedding inside Mangaladevi Temple in Mangalore. Police book FIR on Temple authorities, MCC officials for giving permission and also on four couples for violating covid rules.