ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.


ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am