ಬ್ರೇಕಿಂಗ್ ನ್ಯೂಸ್
21-06-21 03:35 pm Mangaluru Correspondent ಕರಾವಳಿ
ಉಳ್ಳಾಲ, ಜೂ.21: ಕೋವಿಡ್ ನಿಂದ ಮೃತಪಟ್ಟ 12 ಮಂದಿ ಅನಾಥರ ಸದ್ಗತಿಗೆ ಪ್ರಾರ್ಥಿಸಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹಿಂಭಾಗದ ಕಡಲ ತೀರದಲ್ಲಿ ಜಿಲ್ಲಾಡಳಿತದ ವತಿಯಿಂದ ತಿಲಹೋಮ, ಪಿಂಡ ಪ್ರದಾನ ಮಾಡಲಾಯಿತು.
ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟ 12 ಮಂದಿಯ ಮೃತದೇಹದ ಸಂಸ್ಕಾರ ಮಾಡಿದ್ದು, ಮೃತದೇಹಗಳ ಅಸ್ಥಿಯನ್ನು ಶೇಖರಿಸಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಉಳ್ಳಾಲ ವೀರಭದ್ರ ದೇವಸ್ಥಾನದ ಪುರೋಹಿತರಾದ ಶಂಕರ ಕೃಷ್ಣ ಅಡಿಗ ಮಾರ್ಗದರ್ಶನದಲ್ಲಿ ತಿಲಹೋಮ ನಡೆಸಿ ಪಿಂಡ ಪ್ರದಾನ ಮಾಡಲಾಯಿತು. ಮೃತರ ಪರವಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೋಮೇಶ್ವರ ಸಮುದ್ರಕ್ಕೆ ಪಿಂಡ ಪ್ರದಾನ ಮಾಡಿದರು.
ಕೋವಿಡ್ ನಿಂದ ಜಿಲ್ಲೆಯಲ್ಲಿ ಮೃತಪಟ್ಟ 12 ಮಂದಿ ಅನಾಥರ ಮೃತದೇಹಗಳನ್ನ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ನಡೆಸಿದ್ದಲ್ಲದೆ, ಅವರೆಲ್ಲರ ಆತ್ಮಕ್ಕೆ ಸದ್ಗತಿ ದೊರೆಯಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದಲೇ ಪಿಂಡ ಪ್ರದಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.







ಸಹಾಯಕ ಆಯಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದಿ.ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲು, ಕಾರ್ಯದರ್ಶಿ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ ಉಚ್ಚಿಲ್, ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಪ್ರಮುಖರಾದ ಯಶವಂತ ಅಮೀನ್, ಹೇಮಂತ್ ಶೆಟ್ಟಿ, ಪುರುಷೋತ್ತಮ ಕಲ್ಲಾಪು, ಸುರೇಶ್ ಭಟ್ನಗರ, ದೀಪಕ್ ಪಿಲಾರು ಮೊದಲಾದವರು ಉಪಸ್ಥಿತರಿದ್ದರು.
State BJP President Naleen Kumar Kateel performs Pind Daan of 12 unknown persons who died of Covid at Someshwara temple in Ullal.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm